ಅತ್ಯಾಚಾರ ಪ್ರಕರಣ : ಸರ್ಕಾರ ದಕ್ಷತೆಯಿಂದ ಕೆಲಸ ಮಾಡುತ್ತಿದೆ : ಪೂರ್ಣಿಮಾ ಶ್ರೀನಿವಾಸ್

ಬೆಂಗಳೂರು : ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರ ಹಾಗೂ ಪೊಲೀಸ್ ಇಲಾಖೆ ದಕ್ಷತೆಯಿಂದ ಕೆಲಸ ಮಾಡುತ್ತಿದೆ, ಅಪರಾಧಿಗಳು ಖಂಡಿತಾ ಸಿಕ್ಕಿಹಾಕಿಕೊಳ್ತಾರೆ ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದ ಅವರು,  ಕಠಿಣ ಕಾನೂನುಗಳಿವೆ, ಇನ್ನೂ ಕಠಿಣ ಕಾನೂನುಗಳು ಬರಬೇಕಿದೆ ಎಂದು ತಿಳಿಸಿದರು.

ಗೃಹ ಸಚಿವರು ನೆಗೆಟಿವ್ ಹೇಳಿಕೆ ಕೊಟ್ಟಿದ್ದಲ್ಲ, ಬದಲಾಗಿ ಮಹಿಳೆಯರ ಕಾಳಜಿಯಿಂದ ಆ ಹೇಳಿಕೆ ಕೊಟ್ಟಿದ್ದಾರೆ ಅಷ್ಟೇ, ಆ ಸಮಯದಲ್ಲಿ ಮಹಿಳೆಯರು ಅಲ್ಲಿಗೆ ಹೋಗಬಾರದು ಅನ್ನೋ ಹೇಳಿಕೆ ಬೇರೆ ಅರ್ಥ ಕಲ್ಪಿಸಬಾರದು ಎಂದು ಮನವಿ ಮಾಡಿದರು. ಕಿಡಿಗೇಡಿಗಳ ಬಂಧನ ಇನ್ನೂ ಆಗದಿರುವುದು ಸರ್ಕಾರದ ವೈಫಲ್ಯ ಅಂತ ಹೇಳಕ್ಕಾಗಲ್ಲ, ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಳ್ತಿದೆ ಎಂದು ತಿಳಿಸಿದರು.

More News

You cannot copy content of this page