ಹಾವೇರಿಯಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣ : ಸಚಿವ ಡಾ.ನಾರಾಯಣಗೌಡ.

ಹಾವೇರಿ :ಜಿಲ್ಲೆ ರೇಷ್ಮೆ ಗೂಡು ಮಾರಾಟಕ್ಕೆ ಇನ್ನುಮುಂದೆ ರೈತರು ಬೇರೆ ಜಿಲ್ಲೆಗೆ ಅಲೆಯಬೇಕಾಗಿಲ್ಲ.ಹಾವೇರಿ ಜಿಲ್ಲೆಯಲ್ಲೇ ಹೈಟೆ ಕ್ ರೇಷ್ಮೆ ಮಾರಕಟ್ಟೆ ನಿರ್ಮಿಸಲು ನಿವೇಶನ ಗುರುತಿಸಿ ವಾರದೊಳಗೆ ವರದಿ ನೀಡುವಂತೆ ರೇಷ್ಮೆ ಹಾಗೂ ಕ್ರೀಡಾ ಸಚಿವ ಡಾ. ನಾರಾಯಣಗೌಡ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು,ಹಾವೇರಿ ಅಥವಾ ರಾಣೆಬೆನ್ನೂರಿ ನಲ್ಲಿ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಪ್ರತಿನಿತ್ಯ ಒಂದು ಮೆಟ್ರಿಕ್ ಟನ್ ರೇಷ್ಮೆಗೂಡು ಮಾರಾಟವಾಗಬೇಕು.2-3 ಮೆಟ್ರಿಕ್ ಟನ್ ರೇಷ್ಮೆ ಗೂಡನ್ನ ರಾಮನಗರ,ಶಿಡ್ಳಘಟ್ಟ ಮಾರುಕಟ್ಟೆಗೆ ಕೊಂಡೊಯ್ದು ಮಾರಾಟ ಮಾಡುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ರೇಷ್ಮೆ ಮಾರುಕಟ್ಟೆ ನಿರ್ಮಿಸಲು ತೀರ್ಮಾನಿಸಲಾಗಿದೆ.ವಾರದೊಳಗೆ ಮಾರುಕಟ್ಟೆ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ ಸರ್ವೆ ಮಾಡಿ ವರದಿ ನೀಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯ ರೇಷ್ಮೆ ಬೆಳೆ ಉತ್ತಮವಾಗಿದೆ.ಉತ್ತರ ಕರ್ನಾಟಕ ಭಾಗದಲ್ಲಿ ರೇಷ್ಮೆ ಬೆಳೆಗಾರರ ಸಂಖ್ಯೆ ಹೆಚ್ಚಾಗ ಬೇಕು.ಈ ಹಿನ್ನೆಲೆಯಲ್ಲಿ ರೇಷ್ಮೆ ತರಬೇತಿ ಕೇಂದ್ರ ಅಗತ್ಯವಿದ್ದು, ಶೀಘ್ರವೇ ಈ ಸಂಬಂಧ ಕ್ರಮ ವಹಿಸುವುದಾಗಿ ಸಚಿವರು ಹೇಳಿದರು.

ರೇಷ್ಮೆ ಇಲಾಖೆ ಅಡಿ ರೇಷ್ಮೆ ಕೃಷಿಕರಿಗೆ ರೇಷ್ಮೆ ಮನೆಗಳನ್ನು ನೀಡುತ್ತಿದ್ದೇವೆ.ಆದರೆ ಕೆಲ ಅಧಿಕಾರಿಗಳು ಕಮಿಷನ್ ನೀಡದೆ ಮನೆ ನೀಡುತ್ತಿಲ್ಲ.ಬಡವರಿಗೆ ನೀಡುವ ಮನೆ ಅದು.ಕಷ್ಟದಲ್ಲಿರುವ ಕಾರಣಕ್ಕೇ ಮನೆ ನೀಡುವುದು.ಆದರೆ ಅಂತವರಿಂದಲೇ ಅಧಿಕಾರಿ ಗಳು ಲಂಚ ಕೇಳುತ್ತಾರೆ.ಇಂತಹ ಅಧಿಕಾರಿಗಳನ್ನು ಮನೆಗೆ ಕಳಿಸುತ್ತೇನೆ.ರೈತರ ಜೀವನದ ಜೊತೆ ಚೆಲ್ಲಾಟ ಆಡುತ್ತಾರೆ.ಹನಿ ನೀರಾ ವರಿಗೂ ಕಮೀಷನ್ ಕೇಳ್ತಾರೆ‌. ಇದೆಲ್ಲದಕ್ಕು ಬ್ರೇಕ್ ಹಾಕಬೇಕು.ರೈತರ ರಕ್ತ ಕುಡಿಯುವವರನ್ನು ಬಿಡಲ್ಲ.ರೈತರಿಗೆ ಸಂಬಂಧಿಸಿದ ಯಾವುದೇ ಯೋಜನೆ ನೇರವಾಗಿ ಅವರಿಗೆ ತಲುಪಬೇಕು.ಅಧಿಕಾರಿಗಳು ಕಮಿಷನ್ ಕಾರಣಕ್ಕೆ ವಿಳಂಬ ಮಾಡಿದರೆ ಸುಮ್ಮನಿರಲ್ಲ ಎಂದು ಸಚಿವರು ಎಚ್ಚರಿಕೆ ನೀಡಿದರು.

0% ಇ-ಪೇಮೆಂಟ್ ಗೆ ಸಚಿವರು ಗರಂ : ರಾಜ್ಯದ ಎಲ್ಲ ರೇಷ್ಮೆ ಮಾರುಕಟ್ಟೆಯಲ್ಲಿ 100% ಇ-ಪೇಮೆಂಟ್ ಆಗಬೇಕು ಎಂದು ಸೂಚನೆ ನೀಡಲಾಗಿದೆ.ಕೆಲವೆಡೆ ಸ್ವಲ್ಪ ಪ್ರಮಾಣದಲ್ಲಾದರೂ ನಡೆಯುತ್ತಿದೆ.ಆದರೆ ಹಾವೇರಿ ರೇಷ್ಮೆ ಮಾರುಕಟ್ಟೆಯಲ್ಲಿ 0% ಇ-ಪೇಮೆಂಟ್‌ ಇದೆ.ಆನ್ಲೈನ್ ಪೇಮೆಂಟ್ ಆರಂಭ ಮಾಡಲೇ ಇಲ್ಲ.ಸಿಲ್ಕು ಮತ್ತು ಮಿಲ್ಕು ರೈತರ ಜೀವನಾಧಾರ.ಇದರಲ್ಲಿ ಅನ್ಯಾಯವಾಗಬಾ ರದು.ಮಾರುಕಟ್ಟೆಯಲ್ಲಿ ನಗದು ವ್ಯವಹಾರ ನಿಲ್ಲಬೇಕು.ತಕ್ಷಣ ಇ-ಪೇಮೆಂಟ್ ಪ್ರಾರಂಭಿಸಬೇಕು.ಮಾರುಕಟ್ಟೆಯಲ್ಲಿ ಸಿಸಿಕ್ಯಾಮರಾ ಅಳವಡಿಸಬೇಕು.ರೈತರಿಗೆ ಆಗುತ್ತಿರುವ ಅನ್ಯಾಯ ನಿಲ್ಲಬೇಕು.ಇಲ್ಲದಿದ್ದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು.

ಜಿಲ್ಲಾ ಕ್ರೀಡಾಂಗಣಕ್ಕೆ ಭೇಟ,ಪರಿಶೀಲನೆ : ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಹುದ್ದೆ ಖಾಲಿ ಇದ್ದು, ಕೂಡಲೆ ಉತ್ತಮ ಅಧಿ ಕಾರಿಯನ್ನು ತಾತ್ಕಾಲಿಕ ನೇಮಿಸುವಂತೆ ಸಚಿವರು ಸೂಚಿಸಿದರು‌.ಜಿಲ್ಲಾ ಈಜುಕೊಳ ವ್ಯವಸ್ಥೆ ಹದಗೆಟ್ಟಿರುವುದಕ್ಕೆ ಅಸಮಾಧಾನ ವ್ಯಕ್ತಪಡಿದ ಅವರು,ಹೀಗಾಗಿ ಖಾಸಗಿಯವರಿಗೆ ಈಜುಕೊಳ ನಿರ್ವಹಣೆಗೆ ನೀಡಬೇಕು.ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿ,ಈಜು ಪಟುಗಳಿಗೆ ಸೂಕ್ತ ತರಬೇತಿ ನೀಡುವುದಕ್ಕೆ ಈಜುಕೊಳ ಬಳಕೆಯಾಗುವಂತೆ ನೋಡಿಕೊಳ್ಳಬೇಕು.ಇದು ಅಧಿಕಾರಿಗಳ ಜವಾಬ್ದಾರಿ ಎಂದು ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಇದಕ್ಕು ಮುನ್ನ ಸಚಿವರು ಜಿಲ್ಲಾ ಕ್ರೀಡಾಂಗಣ ಹಾಗೂ ಒಳಾಂಗಣ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕ್ರೀಡಾಂಗಣ ಸಂಪೂರ್ಣ ಹದಗೆಟ್ಟಿದೆ.ತಕ್ಷಣ ದುರಸ್ತಿ ಕಾರ್ಯ ಆಗಬೇಕು.ಕೂಡಲೆ ಕ್ರೀಡಾಂಗಣ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.ಕೋವಿಡ್ -19 ಹಿನ್ನೆಲೆಯಲ್ಲಿ ಈಜುಕೊಳ,ಕ್ರೀಡಾಂಗಣ ಎಲ್ಲ ಸ್ಥಗಿತಗೊಳಿಸಲಾಗಿತ್ತು.ಶೀಘ್ರದಲ್ಲೆ ಪುನಾರಂಭ ಮಾಡುತ್ತೇವೆ. ಎಲ್ಲ ದುರಸ್ಥಿಕಾರ್ಯ ಮುಗಿಸಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

More News

You cannot copy content of this page