ಬೆಂಗಳೂರು: ಕಿಚ್ಚ ಸುದೀಪ್ ರವರು ನಟಿಸಿರುವ ವಿಕ್ರಂತ್ ರೋಣ, ಕೋವಿಡ್ ಆರಂಭಿಕ ದಿನಗಳಲ್ಲಿ ಶುರುವಾದ ಮೊದಲ ಮೆಗಾ-ಬಜೆಟ್ ಚಿತ್ರವಾಗಿದ್ದು, ತಂಡದ ಪ್ರತಿ ಘೋಷಣೆಯೊಂದಿಗೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅಭಿನಯ ಚಕ್ರವರ್ತಿಯ ಹುಟ್ಟು ಹಬ್ಬಕ್ಕೆ, ತಂಡವು ಅತ್ಯಾಕರ್ಷಕವಾದ ಮೊದಲ ನೋಟವನ್ನು ಬಿಡುಗಡೆ ಮಾಡಿದೆ.
‘ದಿ ಡೆಡ್ ಮಾನ್ಸ್ ಆಂಥಮ್’, ನಿರೂಪಕನ ಧ್ವನಿಯನ್ನು ಹಿಂಬಾಲಿಸುತ್ತ ಕಗ್ಗತ್ತಲೆಯ ಲೋಕದ ಒಡೆಯ, ಸುದೀಪ್ ರವರು, ಶತ್ರುಗಳಿಗೆ ಭಯ ಹುಟ್ಟಿಸುವ ಸನ್ನಿವೇಶದೊಂದಿಗೆ ಶುರುವಾಗುತ್ತದೆ. ಗಮನ ಸೆಳೆಯುವ ದೃಶ್ಯಗಳು, ವಿಸ್ಮಯಗೊಳಿಸುವ ಹಿನ್ನಲೆ ಸಂಗೀತ, ಸುದೀಪ್ ರವರ ಖದರ್ ಗೆ ಪೂರಕವಾಗಿವೆ. ಈ ಎಲ್ಲಾ ಅಂಶಗಳಿಂದಾಗಿ, ಸೂಕ್ತ ಶೀರ್ಷಿಕೆಯೊಂದಿಗೆ ಇಂದು ರಿಲೀಸ್ ಆಗಿರುವ ‘ದಿ ಡೆಡ್ ಮಾನ್ಸ್ ಆಂಥಮ್’ ವೀಕ್ಷಕರ ಚಿತ್ರದ ಮೇಲಿರುವ ನಿರೀಕ್ಷೆಯನ್ನು ಮುಗಿಲೆತ್ತರಕ್ಕೆ ಕೊಂಡೊಯ್ದಿದೆ.
“ದಿ ಡೆಡ್ ಮಾನ್ಸ್ ಆಂಥಮ್ ಸುದೀಪ್ ರವರ ಹುಟ್ಟು ಹಬ್ಬದ ದಿನ ರಿಲೀಸ್ ಆಗುತ್ತಿರುವುದು ನನಗೆ ಬಹಳ ಖುಷಿಯಾಗಿದೆ. ವಿಕ್ರಾಂತ್ ರೋಣ ಪಾತ್ರದ ನಿಗೂಡತೆಯನ್ನು ಫಸ್ಟ್ ಗ್ಲಿಂಪ್ಸ್ ಅದ್ಭುತವಾಗಿ ಸೆರೆ ಹಿಡಿದಿದೆ. ಚಿತ್ರೀಕರಣದ ಸಮಯದಲ್ಲೇ ನನಗೆ ಇದರ ಮೇಲಿರುವ ಅಪಾರ ಪ್ರಮಾಣದ ನಿರೀಕ್ಷೆಯ ಬಗ್ಗೆ ಅರಿವಿತ್ತು. ಆದರೆ ಸುದೀಪ್ ರವರು ಈ ಪಾತ್ರವನ್ನು ಸಾಕಾರಗೊಳಿಸುತ್ತಿರುವುದು, ನನ್ನ ನಿರೀಕ್ಷೆಯನ್ನು ಇನ್ನೂ ಹೆಚ್ಚಾಗಿಸಿದೆ. ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು,” ಎಂದು ಹಾರೈಸಿದರು ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ.
ನಿರ್ಮಾಪಕರಾದ ಜಾಕ್ ಮಂಜುನಾಥ್ ರವರು, “ಸುದೀಪ್ ರವರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು, ವಿಕ್ರಾಂತ್ ರೋಣ ಫಸ್ಟ್ ಗ್ಲಿಂಪ್ಸ್ ನೊಂದಿಗೆ ವ್ಯಕ್ತ ಪಡಿಸುತ್ತಿದ್ದೇವೆ. ಎಲ್ಲರ ಕೈ ಕಟ್ಟುವಂತಹ ಸಂದರ್ಭದಲ್ಲಿ ನಾವು ಇಷ್ಟು ಸಕಾರಾತ್ಮಕವಾಗಿ ಮುನ್ನಡೆಯುತ್ತಿರುವುದೇ ಸಂತೋಷದ ವಿಷಯ. ಅವರ ಹುರುಪು, ಉತ್ಸಾಹ ಮತ್ತು ಸಿನೆಮಾ ಮಾಡುವ ಛಲಕ್ಕೆ ಯಾವುದೇ ಸಮಯದ ಪರೀಕ್ಷೆಯನ್ನು ತಡೆಯುವ ಶಕ್ತಿಯಿದೆ. ಇದೇ ವಿಕ್ರಾಂತ್ ರೋಣ ಚಿತ್ರವನ್ನು ವಿಶೇಷವಾಗಿಸುತ್ತದೆ,” ಎಂದು ಶುಭ ಕೋರಿದರು.
ವಿಕ್ರಾಂತ್ ರೋಣ, ಒಂದು ಬಹುಭಾಷಾ ಆಕ್ಷನ್ ಅಡ್ವೆಂಚರ್ ಪ್ರಕಾರದ ಚಿತ್ರವಾಗಿದ್ದು, 55 ದೇಶಗಳಲ್ಲಿ, 14 ಭಾಷೆಗಳಲ್ಲಿ 3-D ಬಿಡುಗಡೆಯನ್ನು ಕಾಣಲಿದೆ. ಅನೂಪ್ ಭಂಡಾರಿಯವರ ನಿರ್ದೇಶನ, ಜಾಕ್ ಮಂಜುನಾಥ್ ಹಾಗು ಶಾಲಿನಿ ಮಂಜುನಾಥ್ ರವರ ನಿರ್ಮಾಪಣೆ, ಅಲಂಕಾರ್ ಪಾಂಡಿಯನ್ ರವರ ಸಹ-ನಿರ್ಮಾಪಣೆಯಿರುವ ಚಿತ್ರಕ್ಕೆ ಬಿ. ಅಜನೀಶ್ ಲೋಕ್ ನಾಥ್ ರವರು ಹಿನ್ನಲೆ ಸಂಗೀತವನ್ನು ನೀಡಿದ್ದಾರೆ. ಖ್ಯಾತ ಪ್ರಶಸ್ತಿಗಳ ವಿಜೇತರಾದ, ಕಲಾ ನಿರ್ದೇಶಕ ಶಿವಕುಮಾರ್ ಹಾಗು ಛಾಯಗ್ರಾಹಕ ವಿಲಿಯಮ್ ಡೇವಿಡ್ ರವರು ತಂಡವನ್ನು ಪೂರ್ಣಗೊಳಿಸುತ್ತಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ನಿರೂಪ್ ಭಂಡಾರಿ, ನೀತಾ ಅಶೋಕ್ ಹಾಗು ಜ್ಯಾಕಲೀನ್ ಫರ್ನ್ಯಾಂಡಿಸ್ ತಾರಾಗಣದಲ್ಲಿದ್ದಾರೆ.