ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ ನೀಡಬೇಕಾಗಿದೆ : ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು: ಚಳಿ, ಮಳೆ, ಗಾಳಿ ಎಂಬಿತ್ಯಾದಿಗಳನ್ನು ಲೆಕ್ಕಿಸದೇ ಮನೆ ಮನೆಗೂ ಬೆಳಗಾಗುವುದರೊಳಗೆ ಪತ್ರಿಕೆ ಮುಟ್ಟಿಸುವ ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ ಬಹಳ ಮುಖ್ಯ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಮಕೈಗೊಳ್ಳುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರು ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ಪತ್ರಿಕಾ ವಿತರಕರ ದಿನಾಚರಣೆ  ಅಂಗವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, “ಮಳೆ ಇರಲಿ, ಚಳಿ ಇರಲಿ ಅಥವಾ ಯಾವುದೇ ತುರ್ತು ಸಂದರ್ಭವೂ ಇರಲಿ. ಬೆಳಗ್ಗೆ ನಾವು ನಿದ್ದೆಯಿಂದ ಏಳುವುದಕ್ಕೆ ಮುನ್ನವೇ ಪತ್ರಿಕೆ ನಮ್ಮ ಮನೆಯ ಅಂಗಳದಲ್ಲಿರುತ್ತದೆ. ಇದಕ್ಕೆ ಕಾರಣರಾದವರನ್ನು ಅಲಕ್ಷ್ಯ ಮಾಡುವಂತಿಲ್ಲಎಂದರು.

ಕೋವಿಡ್ ಸಮಯದಲ್ಲಿಯೂ ನಮ್ಮ ಮನೆಗೆ ಪತ್ರಿಕೆ ಬರುವುದು ನಿಲ್ಲಲಿಲ್ಲ. ತಮ್ಮ ಜೀವವನ್ನೂ ಲೆಕ್ಕಿಸದೇ ಮನೆಮನೆಗೂ ಪತ್ರಿಕೆ ಮುಟ್ಟಿಸಿದ್ದು ವಿತರಕರ ವೃತ್ತಿ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾಮಾಜಿಕವಾಗಿ ವೃತ್ತಿ ತಾರತಮ್ಯ ಇರಬಾರದು. ಮನೆ ಮನೆಗೂ ಪತ್ರಿಕೆ ತಲುಪಿಸುವ ಪತ್ರಿಕಾ ವಿತರಕರನ್ನು ನಾವು ಮುಖ್ಯವಾಹಿನಿಯಲ್ಲಿ ಎಲ್ಲ ವೃತ್ತಿಪರರಿಗೂ ಸಿಗುವಂಥ ಸೌಲಭ್ಯಗಳು ಸಿಗಬೇಕು. ಸರಕಾರದಿಂದ ಸಿಗಬಹುದಾದ ಎಲ್ಲ ಅನುಕೂಲಗಳನ್ನು ಮಾಡಿಕೊಡಲಾಗುವುದು ಎಂದು ಅವರು ಹೇಳಿದರು.

ವಸತಿ ಸಚಿವ ವಿ.ಸೋಮಣ್ಣ, ಕಾರ್ಮಿಕ ಸಚಿವ ಶಿವರಾಮ್  ಹೆಬ್ಬಾರ್, ಹಿರಿಯ ಪತ್ರಕರ್ತರಾದ  ವಿಶ್ವೇಶ್ವರ ಭಟ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಹಿರಿಯ ಪತ್ರಕರ್ತ ಬಿ.ವಿ.ಮಲ್ಲಿಕಾರ್ಜುನಯ್ಯ ಮುಂತಾದವರು ಕಾರ್ಯಕ್ರಮದಲ್ಲಿ  ಉಪಸ್ಥಿತರಿದ್ದರು.

More News

You cannot copy content of this page