ಬೆಂಗಳೂರು: ನಗರದ ಲಕ್ಕಸಂದ್ರದಲ್ಲಿ3 ಅಂತಸ್ತಿನ ಹಳೆಯ ಕಟ್ಟಡ ಕುಸಿದಿದೆ.ಮನೆ ಬೀಳುವ ಭೀಕರ ದೃಶ್ಯ ಕಂಡು ಸ್ಥಳೀಯರು ಹಾಗೂ ಅಕ್ಕಪಕ್ಕದ ಮನೆಯ ಜನರು ಬೆಚ್ಚಿ ಬಿದ್ದಿದ್ದಾರೆ.ಮನೆಯಲ್ಲಿ 50ಕ್ಕೂ ಹೆಚ್ಚು ಜನರು ವಾಸವಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲವೆನ್ನಲಾಗಿದೆ.
ಬಿಟಿಎಂ ಕ್ಷೇತ್ರದ ಶಾಸಕ ,ಮಾಜಿ ಸಚಿವ ರಾಮಲಿಂಗಾರೆಡ್ಡಿ ಮನೆಯಿಂದ ಅನತಿ ದೂರದ ಲ್ಲಿಯೇ ಕಟ್ಟಡವಿದೆ.ಕಟ್ಟಡಲ್ಲಿ ಮೆಟ್ರೋ ಕಾಮಗಾರಿ ಮಾಡುತ್ತಿದ್ದ 70ಕ್ಕೂ ಹೆಚ್ಚು ಕಾರ್ಮಿಕರು ಕಟ್ಟಡದಲ್ಲಿ ವಾಸವಾಗಿದ್ದರು.ಹಳೇ ಕಟ್ಟಡ ಕುಸಿತದಿಂದ ಅಕ್ಕ ಪಕ್ಕದ ಮೂರು –ನಾಲ್ಕು ಕಟ್ಟಡಗಳಿಗೆ ಹಾನಿಯಾಗಿದೆ.ಕಟ್ಟಡ ಕುಸಿಯುವುದಕ್ಕಿಂತ ಕೆಲ ಹೊತ್ತಿಗೂ ಮುನ್ನ ಅಗ್ನಿಶಾಮಕ ಸಿಬ್ಬಂದಿ ಕಾರ್ಮಿಕರನ್ನು ಹಾಗು ಅಕ್ಕಪಕ್ಕದ ಮನೆಯಲ್ಲಿದ್ದ ಜನರನ್ನು ತೆರವುಗೊಳಿಸಿದ್ದರು. ಸ್ಥಳೀಯರು ರಸ್ತೆಯಲ್ಲಿ,ಸಮೀಪ ವಿದ್ದ ವಾಹನಗಳನ್ನು ತೆರವುಗೊಳಿಸುವ ಮೂಲಕ ಅನಾಹುತದಿಂದಾಗುವಅಪಾಯವನ್ನು ತಪ್ಪಿಸಿದ್ದಾರೆ.ಹೀಗಾಗಿ ಮೆಟ್ರೋ ಕಾರ್ಮಿಕರ ತೆರವಿನಿಂದ ಭಾರಿ ಅನಾಹುತ ತಪ್ಪಿದೆ.ಹಳೇ ಕಟ್ಟಡ ಕುಸಿಯುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದ್ದು ಸಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.

ಸುರೇಶ್ ಎಂಭುವವರಿಗೆ ಸೇರಿದ ಈ ಮನೆ ಲಕ್ಕಸಂದ್ರದ 7ನೇ ಮುಖ್ಯರಸ್ತೆ,14ನೇ ಕ್ರಾಸ್ನಲ್ಲಿನ ಈ ಮೂರು ಅಂತಸ್ತಿನ ಕಟ್ಟಡವನ್ನು 1974ರಲ್ಲಿ ನಿರ್ಮಿಸಲಾಗಿತ್ತು.ರಾತ್ರಿ ವೇಳೆ ಹಳೆಯ ಕಟ್ಟಡ ಕುಸಿದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು.ಕಟ್ಟಡದಲ್ಲಿ 50ಕ್ಕೂ ಹೆಚ್ಚು ಮೆಟ್ರೋ ಕಾರ್ಮಿಕರು ವಾಸಿಸುತ್ತಿದ್ದರು.ಸ್ವಲ್ಪದರಲ್ಲಿ ಪಾರಾಗಿ ಮನೆಯಿಂದ ಹೊರಬಂದಿದ್ದಾರೆ. ಯಾವುದೇ ಅನಾಹುತ ಸಂಭವಿಸಲಿಲ್ಲ.

ಕಟ್ಟಡ 50 ವರ್ಷಕ್ಕೂ ಹಳೆಯದಾಗಿದ್ದು ಬಿರುಕು ಬಿಟ್ಟಿತ್ತು.ಹೀಗಾಗಿ ಕಟ್ಟಡವನ್ನು ತೆರವು ಮಾಡುವಂತೆ ಸ್ಥಳೀಯರು ಮಾಲೀಕನಿ ಗೆ ಮನವಿ ಮಾಡಿದ್ದರು.ಅಗಾಗ ಮನೆಯ ಗೋಡೆಯಿಂದ ಶಬ್ದ ಬರುತ್ತಿತ್ತು.ಇಂದು ಬೆಳಗ್ಗೆ ಗೋಡೆಯಿಂದ ಮಣ್ಣು ಬೀಳುತ್ತಿತ್ತು. ಮಾಲೀಕ ನಿರ್ಲಕ್ಷ್ಯ ವಹಿಸಿದ ಹಿನ್ನಲೆಯಲ್ಲಿ ಮನೆಯನ್ನ ತೆರವು ಮಾಡುವಂತೆ ಬಿಬಿಎಂಪಿ ಅಧಿಕಾರಿಗಳಿಗೂ ಸ್ಥಳೀಯರು ದೂರು ನೀಡಿದ್ದರು ಎನ್ನಲಾಗಿದೆ.ನಂಜಪ್ಪಾ ಎನ್ನುವವರು 1974ರಲ್ಲಿ ಈ ಮನೆಯನ್ನ ಕಟ್ಟಿಸಿದ್ರು.ಇತ್ತೀಚೆಗೆ ಅವರು ಈ ಮನೆಯನ್ನು ಬಾಡಿಗೆಗೆ ಕೊಟ್ಟಿದ್ರು ಎಂದು ಲಕ್ಕಸಂದ್ರದ ಸ್ಥಳೀಯರು ಮಾಹಿತಿ ಹಂಚಿಕೊಂಡಿದ್ದಾರೆ.