ಎಸ್ ಎಂ ಕೃಷ್ಣಾ ಅವರಿಗೆ ನಾಡಹಬ್ಬದ ಉದ್ಘಾಟನೆಗೆ ಅಧಿಕೃತ ಆಮಂತ್ರಣ

ಬೆಂಗಳೂರು: ಮೈಸೂರು ದಸರಾ ಉದ್ಘಾಟಕರಾಗಿರುವ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣಾ ಅವರ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿದರು.

ನಾಡ‌ ಹಬ್ಬ ದಸರಾ ಮಹೋತ್ಸವ – 2021ರ ಉದ್ಘಾಟನೆಗೆ ಅಧಿಕೃತವಾಗಿ ಮುಖ್ಯಮಂತ್ರಿ ಅವರು ಆಹ್ವಾನ ನೀಡಿದರು.ಈ ಸಂದರ್ಭದಲ್ಲಿ ಪ್ರೇಮಾ ಕೃಷ್ಣ,  ಕಂದಾಯ ಸಚಿವ ಆರ್ ಅಶೋಕ್, ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಸಂಸದ ಪ್ರತಾಪ್ ಸಿಂಹ,  ಮೈಸೂರು ಮೇಯರ್ ಸುನಂದಾ ಪಾಲನೇತ್ರ ಉಪಸ್ಥಿತರಿದ್ದರು.

More News

You cannot copy content of this page