ಬೆಂಗಳೂರು: ನಿರಂತರವಾಗಿ ಅಡುಗೆ ಅನಿಲ ಬೆಲೆ ಏರಿಕೆ ಮಾಡುವ ಮೂಲಕ ಜನರ ಬದುಕಿಗೆ ಕೊಳ್ಳಿ ಇಡಲಾಗುತ್ತಿದೆ.ಇಷ್ಟಾದರೂ ಆರ್ ಎಸ್ ಎಸ್ ಕೇಂದ್ರದ ನೀತಿ ವಿರುದ್ಧ ಧ್ವನಿ ಎತ್ತುತ್ತಿಲ್ಲವೇಕೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರ ಮತ್ತು ಸಂಘ ಪರಿವಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಇಂದು ಸರಣಿ ಟ್ವೀಟ್ ಮಾಡಿರುವ ಅವರು,ಇಂದಿನ ಬೆಳಗಿನ ಶಾಕ್..! 14.2 ಕೆಜಿ ತೂಕದ ಅಡುಗೆ ಅನಿಲ ಸಿಲಿಂಡರ್ ಬೆಲೆ 15 ರೂ. ಹೆಚ್ಚಳ ಮಾಡಲಾಗಿದೆ.ಈ ಸಿಲಿಂಡರ್ ಬೆಲೆ ಈಗ 900 ರೂ.ಗಡಿಯಲ್ಲಿದೆ. 7 ವರ್ಷಗಳ ಅಚ್ಛೇದಿನದ ಭ್ರಮೆಯಲ್ಲಿ ಜನರ ಬದುಕು ಬೆಂಕಿಯಲ್ಲಿ ಬೇಯುತ್ತಿದ್ದಾರೆ ಎಂದು ಕೇಂದ್ರದ ನೀತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೋವಿಡ್,ಬೆಲೆ ಏರಿಕೆಯಿಂದ ಜನಜೀವನ ಹಳ್ಳಹಿಡಿದು ಹೋಗಿದೆ.ಬಡ ಭಾರತದ ಜೀವ ಹಿಂಡುತ್ತಿರುವ ಶ್ರೀಮಂತ ಭಾರತದ ಸಾರ ಥ್ಯ ವಹಿಸಿರುವವರು ಒಂದಿಬ್ಬರು ಉದ್ಯಮಗಳ ಜೋಳಿಗೆ ತುಂಬಿ ಜನರ ಬಾಳಿಗೆ ಕೊಳ್ಳಿ ಇಡುತ್ತಿರುವುದು ಎಲ್ಲರಿಗೂ ಗೊತ್ತಾಗು ತ್ತಿದೆ.ಅನಿಯಂತ್ರಿತ ಬೆಲೆ ಏರಿಕೆ ಮಾಫಿಯಾ ಹಿಂದೆ ಇರುವ ಶಕ್ತಿಗಳ ಬಗ್ಗೆ ಬಿಜೆಪಿ ನಾಯಕರು ಮಾತನಾಡಲಿ ಎಂದು ಪ್ರಧಾನಿ ಮೋದಿ,ಗೃಹ ಸಚಿವ ಅಮಿತ್ ಷಾ ಸೇರಿದಂತೆ ಪ್ರಮುಖ ನಾಯಕರನ್ನು ಎಚ್.ಡಿ.ಕೆ.ಪ್ರಶ್ನಿಸಿದ್ದಾರೆ.

ದುಡಿಯುವ ಕೈಗಳಿಗೆ ಕೆಲಸವಿಲ್ಲ.ಅನ್ನಕ್ಕಾಗಿ ಹಾಹಾಕಾರವಿದೆ.ಸೇವೆ ಎಂದು ಸೋಗಲಾಡಿತನ ತೋರಿಸು ವ ಆರ್ ಎಸ್ ಎಸ್ ಬೆಲೆ ಏರಿಕೆ ಬಗ್ಗೆ ಮಾತನಾಡಬೇಕು.ಬಡವರ ಭಾರತ,ಶ್ರೀಮಂತರ ಭಾರತದ ಬಗ್ಗೆ ಹೇಳಬೇಕು.ಅದಕ್ಕೆ ಕಾರಣವಾದ 7ವರ್ಷಗಳ ಆಡಳಿತ ದ ಬಗ್ಗೆ ದನಿಯೆತ್ತಬೇಕು.ಇಲ್ಲವಾದರೆ ಬಡವರ ಭಾರತದ ಆಕ್ರೋಶಕ್ಕೆ ನೀವು ತುತ್ತಾಗುವುದು ತಪ್ಪುವುದಿಲ್ಲ ಎಂದು ಭವಿಷ್ಯದಲ್ಲಿ ಬಿಜೆಪಿಗೆ ದೇಶದ ಜನತೆ ಪಾಠಕಲಿಸಲಿದ್ದಾರೆಂದು ಎಂದು ಎಚ್ಚರಿಕೆ ಸಂದೇಶ ನೀಡಿದ್ದಾರೆ.