ಬೆಂಗಳೂರು : ಸಂಘಪರಿವಾರದವರಿಗೆ ಖುರ್ಚಿಯ ವ್ಯಾಮೋಹವಿಲ್ಲ.ಆರ್ ಎಸ್ಎಸ್ ಬಗ್ಗೆ ಕಳೆದ ಒಂದು ವಾರದಿಂದ ಚರ್ಚೆಯಾ ಗುತ್ತಿದೆ.ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ,ಸಿದ್ದರಾಮಯ್ಯ ಅವರಿಗೆ ಆರ್ ಎಸ್ಎಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.
ವಿಕಾಸಸೌಧದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಸಂಘ ಪರಿವಾರದವರಿಗೆ ಕುರ್ಚಿ ವ್ಯಾಮೋಹವಿಲ್ಲ. ಕುರ್ಚಿಗಾಗಿ ಎಂದೂ ಹೋರಾಡಿಲ್ಲ.ಸಮಾಜಸೇವೆಗಾಗಿ ಸಂಘ ಸಮರ್ಪಣೆ ಮಾಡಿಕೊಂಡಿದೆ.ದೇಶಕ್ಕಾಗಿ ತ್ಯಾಗ ಬಲಿದಾನ ಮಾಡು ತ್ತಿದೆ.ಕುರ್ಚಿ ವ್ಯಾಮೋಹ ಜೆಡಿಎಸ್,ಕಾಂಗ್ರೆಸ್ಸಿಗಿದೆ. ಅಲ್ಪಸಂಖ್ಯಾತರ ಉದ್ಧಾರಕರು ಎಂದು ಹೇಳಿಕೊಳ್ಳುತ್ತಾರಷ್ಟೆ.ಸಿದ್ದರಾಮಯ್ಯ ಟಿಪ್ಪು ಜಯಂತಿ ಮಾಡಿ ವೋಟ್ ಬ್ಯಾಂಕ್ ರಾಜಕಾರಣ ಮಾಡಿದ್ದರು.ಅಲ್ಪಸಂಖ್ಯಾತರಿಗೂ ಕೂಡ ಇಂದು ಸಿದ್ದರಾಮಯ್ಯ ಇವರ ಬಂಡವಾಳ ಗೊತ್ತಾಗಿದೆ.ಇವರೆಲ್ಲ ವೋಟ್ ಬ್ಯಾಂಕ್ ಗಾಗಿ ಸಂಘದ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಆರ್ ಎಸ್ ಎಸ್ ಬಗ್ಗೆ ಅನಗತ್ಯ ಟೀಕೆ ಸರಿಯಲ್ಲ : ತಾಲಿಬಾನ್ ಸಂಸ್ಕೃತಿ ನಿಮ್ಮದು.ಕೊಳ್ಳಿಯಿಡುವ ಸಂಸ್ಕೃತಿ ವಿಕೃತ ಮನಸ್ಸಿನ ಕಾಂಗ್ರೆಸ್ ಜೆಡಿಎಸ್ ನಾಯಕರು ವೋಟಿಗಾಗಿ ರಾಜಕಾರಣ ಮಾಡಬಾರದು. ಆರ್ ಎಸ್ ಎಸ್ ಬಗ್ಗೆ ಮಾತನಾಡಿದರೆ ಇವರುಗಳಿಗೆ ನಷ್ಟ.ಸಂಘ ಒಳ್ಳೆಯ ಮಾರ್ಗದರ್ಶನ ಮಾಡುತ್ತದೆ. ನೀವೊಮ್ಮೆ ಸಂಘಕ್ಕೆ ಇವರುಗಳು ಒಮ್ಮೆ ಬಂದು ನೋಡಿದರೆ ಅಲ್ಲಿನ ವಾಸ್ತವ ನಿಮಗೆ ಗೊತ್ತಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.
ಪ್ರತಿಭಾವಂತರು ಎಲ್ಲಿ ಬೇಕಾದರೂ ಇರಬಹುದು.ಅದರಂತೆ ಸಂಘಪರಿವಾರದಲ್ಲಿಯೂ ಕೂಡ ಹಲವರು ಪ್ರತಿಭಾವಂತರಿದ್ದಾರೆ. ಪ್ರತಿಭಾವಂತರು ಉನ್ನತ ಹುದ್ದೆಯಲ್ಲಿರುವುದೇನೂ ತಪ್ಪಲ್ಲ.ನಾವು ಆಪರೇಷನ್ ಕಮಲ ಮಾಡಿಲ್ಲ.ಮೊದಲು ಜೆಡಿಎಸ್ ಆಪರೇ ಷನ್ ಆರಂಭ ಮಾಡಿದ್ದು ಎಂದರು.

ಇದೇ ವೇಳೆ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು,ಬಿಜೆಪಿ ಪಕ್ಷದಲ್ಲಿ ಬಿ.ಎಸ್.ಯಡಿಯೂರಪ್ಪ ನವರನ್ನು ಸೈಡ್ ಲೈನ್ ಮಾಡಿಲ್ಲ.ಐಟಿ ರೇಡ್ ಗೂ ಯಡಿಯೂರಪ್ಪಗೂ ಸಂಬಂಧವಿಲ್ಲ.ಸತ್ಯಾಂಶ ಹೊರಬರಲಿದೆ ಎಂದು ಅವರು ಸ್ಪಷ್ಟಪಡಿಸಿದರು.