ಹಾನಗಲ್ : ಅಲ್ಪಸಂಖ್ಯಾತರ ಬಗ್ಗೆ ಕಾಂಗ್ರೆಸ್ ನವರು ಎಲ್ಲಿಲ್ಲದ ಪ್ರೀತಿ ತೋರಿಸುತ್ತಾರೆ. ಚುನಾವಣೆ ಸಮಯದಲ್ಲಿ ಮಾತ್ರ ಈ ಸಮುದಾಯ ಅವರಿಗೆ ನೆನಪಾಗುತ್ತದೆ. ಉಳಿದ ಸಮಯದಲ್ಲಿ ಅವರನ್ನು ಕಾಂಗ್ರೆಸ್ ಪರಿಗಣಿಸುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು.
ಹಾನಗಲ್ ನಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ೫ ವರ್ಷ ಅಲ್ಪಸಂಖ್ಯಾತರನ್ನು ಬಾವಿಯಲ್ಲಿಟ್ಟಿ ರುತ್ತಾರೆ. ಚುನಾವಣೆ ಬಂದಾಗ ಹಗ್ಗ ಕೊಟ್ಟು ಮೇಲೆ ತಂದು ಓಟ್ ಹಾಕಿಸಿಕೊಂಡು ಮತ್ತೆ ಬಾವಿಗೆ ದೂಡುತ್ತಾರೆ. ಅಲ್ಪಸಂಖ್ಯಾತ ರನ್ನು ಕಾಂಗ್ರೆಸ್ ನವರು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿಯಲ್ಲಿ ಯಾರೊಬ್ಬರ ಶಾಸಕ ಅಥವಾ ಮಂತ್ರಿನೂ ಕೂಡ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು ಇಲ್ಲ ಎಂದು ಮಾಡಿರುವ ಆರೋಪಕ್ಕೆ ಸಿಎಂ ಬಸವರಾಜ ಬೊಮ್ಮಾಯಿಯವರು ಪ್ರತ್ಯಾರೋಪ ಮಾಡಿದರು.

ಟೀಕೆಗಳೇ ಅಭಿವೃದ್ಧಿಯ ಮೆಟ್ಟಿಲು
ಅಲ್ಪಸಂಖ್ಯಾತರಿಂದಲೇ ಕಾಂಗ್ರೆಸ್ ಅಸ್ಥಿತ್ವದಲ್ಲಿದೆ, ಅವರಿಲ್ಲದಿದ್ದರೆ ಕಾಂಗ್ರೆಸ್ ಪಕ್ಷ ದೇಶದಲ್ಲಿ ಹುಡುಕುವಂತಹ ಪರಿಸ್ಥಿತಿ ಬರು ತ್ತಿತ್ತು ಎಂದು ಹೇಳಿದರು. ಪ್ರತಿಪಕ್ಷದವರ ಟೀಕೆಗಳೇ ನನಗೆ ಮೆಟ್ಟಿಲು. ಈ ಟೀಕೆ ಎಂಬ ಮೆಟ್ಟಿಲುಗಳನ್ನು ಒಂದೊಂದಾಗಿ ಏರಿ ಕರ್ನಾಟಕವನ್ನು ಅಭಿವೃದ್ಧಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.
ಯಾರು ಎಷ್ಟೇ ಟೀಕೆ ಮಾಡಿಲಿ. ನನ್ನ ಗುರಿ ರೈತರ, ದೀನದಲಿತರ, ನೀರಾವರಿ ಯೋಜನೆಗಳ ಕರ್ನಾಟಕದ ಸಮಗ್ರ ಅಭಿವೃದ್ದಿಯತ್ತ ಮಾತ್ರ ಇರುತ್ತದೆ ಎಂದು ಅವರು ಸ್ಪಷ್ಟಪಡಿಸಿದರು. ಸಂಪೂರ್ಣ ಕರ್ನಾಟಕವನ್ನು ಅಭಿವೃದ್ಧಿ ಮಾಡುವುದೊಂದೇ ನನ್ನ ಕಾಯಕ. ಆ ಗುರಿಯಿಂದ ನಾನು ವಿಮುಖವಾಗುವುದಿಲ್ಲ ಎಂದು ಅವರು ಪ್ರಚಾರದ ವೇಳೆ ಹೇಳಿದರು.
ಕಾಂಗ್ರೆಸ್ ಟೀಕೆಗೆ ಬೊಮ್ಮಾಯಿ ಅನುದಾನದ ರಿಪೋರ್ಟ್ ಕಾರ್ಡ್ ಪ್ಲೇ :
ಹಾನಗಲ್ ತಾಲೂಕಿನ 28433 ರೈತರಿಗೆ ತಲಾ ರೂ. 10000 ನೀಡಲಾಗಿದೆ.
ಕೋವಿಡ್ ಸಂದರ್ಭದಲ್ಲಿ 12000 ಕಾರ್ಮಿಕರಿಗೆ ಕಿಟ್ ನೀಡಲಾಗಿದೆ.
ಪ್ರಧಾನಮಂತ್ರಿ ಕಲ್ಯಾಣ ಯೋಜನೆಯಲ್ಲಿ 66000 ಉಚಿತವಾಗಿ ಪಡಿತರ ನೀಡಲಾಗಿದೆ.
ಕಟ್ಟಡ ಕಾರ್ಮಿಕರಿಗೆ ರೂ.42 ಕೋಟಿ ನೀಡಲಾಗಿದೆ
ಹೂವು ಮಾರುವ 6462 ಜನರಿಗೆ ತಾಲಾ ರೂ. 10000 ನೀಡಲಾಗಿದೆ,
ಹಣ್ಣು ಮಾರುವ 1680 ಜನರಿಗೆ ತಲಾ ರೂ. 10000 ನೀಡಲಾಗಿದೆ.
ಒಟ್ಟು ರೂ. 17.60 ಕೋಟಿ ಹಾನಗಲ್ ತಾಲೂಕಿನ ಜನರಿಗೆ ನೀಡಲಾಗಿದೆ,
ಮೆಕ್ಕೆಜೋಳ ಬೆಳೆಗಾರರಿಗೆ ರೂ.೧೭.೬೩ ಕೋಟಿ ಅನುದಾನ ನೀಡಲಾಗಿದೆ.
ಎಸ್.ಸಿ ಎಸ್.ಟಿ ಸಮುದಾಯಕ್ಕೆ ರೂ.೨೦ ಕೋಟಿ ಅನುದಾನ ನೀಡಲಾಗಿದೆ.
ಗ್ರಾಮೀಣ ಮತ್ತು ಲೋಕೋಪಯೋಗಿ ಸೇರಿ ಒಟ್ಟು ರೂ.೮೦ ಕೋಟಿ ಈ ವರ್ಷ ಮಂಜೂರು ಮಾಡಲಾಗಿದೆ
ಅಕ್ಕಿ ಆಲೂರು ಮತ್ತು ಹಾನಗಲ್ ಎರಡೂ ಐಟಿಐ ಉನ್ನತೀಕರಣಕ್ಕೆ ರೂ.೬೦ ಕೋಟಿ ನೀಡಲಾಗಿದೆ.
ಗ್ರಾಮೀಣ ಕುಡಿಯುವ ನೀಡಿಗೆ ರೂ.೬೪ ಕೋಟಿ ಮಂಜೂರಾಗಿದೆ ಅದರಲ್ಲಿ ರೂ.೨೬ ಕೋಟಿ ಅನುದಾನ ಬಳಕೆ ಆಗಿದೆ.
ಹಾನಗಲ್ ಕ್ಷೇತ್ರದಲ್ಲಿ ರೂ.೨೦ ಕೋಟಿ ಅನುದಾನವನ್ನು ಶಿವಕುಮಾರ ಉದಾಸಿ ಅವರು ಮಂಜೂರು ಮಾಡಿಸಿದ್ದಾರೆ
ಕಾಯಕದಲ್ಲಿ ನಂಬಿಕೆ
ಭಾರತೀಯ ಜನತಾ ಪಕ್ಷ ಕಾಯಕದಲ್ಲಿ ನಂಬಿಕೆ ಇಟ್ಟಿದೆ. ಮಾತುಗಳಿಂದ ಹೊಟ್ಟೆ ತುಂಬುವುದಿಲ್ಲ ಅಭಿವೃದ್ಧಿಯಾಗುವುದಿಲ್ಲ. ರಾಜಕಾರಣ ಅಂದರೆ ಜನರನ್ನು ಮರುಳು ಮಾಡುವುದಲ್ಲ. ಕೆಳಮಟ್ಟದಲ್ಲಿ ಭಾಷೆ ಬಳಸಿದರೆ ದೊಡ್ಡವರಾಗುವುದಿಲ್ಲ. ಅಭಿವೃದ್ಧಿ ಒಂದೇ ನಮ್ಮ ಪಕ್ಷದ ಅಜೆಂಡಾ ಎಂದು ಅವರು ಹೇಳಿದರು. ನಮ್ಮ ಜನ ಕೃತಜ್ಞರು ಕಷ್ಟಕಾಲದಲ್ಲಿ ಕೈಹಿಡಿದ ಸರ್ಕಾರವನ್ನು ಹಾನಗಲ್ ತಾಲೂಕಿನ ಜನ ಕೈ ಬಿಡುವುದಿಲ್ಲ ಎಂದು ಹೇಳಿದರು.

ಬಿಎಸ್ ಯಡಿಯೂರಪ್ಪ ಅವರು ಈ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಹಾನಗಲ್ ಕ್ಷೇತ್ರದ ಜನ ಕೆರೆ ತುಂಬಿಸುವ ಯೋಜನೆಯ ಬೇಡಿಕೆ ಇಟ್ಟಿದ್ದರು. ಈ ಕ್ಷೇತ್ರದ ಅಭಿವೃದ್ಧಿಗಾಗಿ ಒಂದೇ ದಿನದಲ್ಲಿ 625 ಕೋಟಿ ಅನುದಾನವನ್ನು ಬಿಎಸ್ ಯಡಿಯೂರಪ್ಪ ಅವರು ಮಂಜೂರು ಮಾಡಿದರು. ಇದುನ ಭಾರತೀಯ ಜನತಾ ಪಕ್ಷ ಅಭಿವೃದ್ಧಿಗೆ ನೀಡುವ ಮಹತ್ವ ಎಂದು ಬೊಮ್ಮಾಯಿ ಹೇಳಿದರು.
ಚುನಾವಣಾ ಪ್ರಣಾಣಾಳಿಕೆ ಬಿಡುಗಡೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹಾನಗಲ್ ವಿಧಾನಸಭಾ ಚುನಾವಣೆ ಪ್ರಣಾಳಿಕೆಯನ್ನು ಹಾನಗಲ್ಲಿನಲ್ಲಿಯ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ್ ಅವರ ಮನೆಯಲ್ಲಿ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಹಾಗೂ ಸಚಿವರುಗಳು ಉಪಸ್ಥಿತರಿದ್ದರು.