ಬೆಳಗಾವಿ : ರಸ್ತೆ ಅಭಿವೃದ್ಧಿಗೆ ಒತ್ತಾಯಿಸಿ ನಡು ರಸ್ತೆಯಲ್ಲಿ ಹೋಮ ಹವನ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಲೂಕಿನ ಸುಟ್ಟಟ್ಟಿ- ಯಲ್ಲಮ್ಮವಾಡಿ ರಸ್ತೆಯಲ್ಲಿ ನಡೆದಿದೆ.
ರಸ್ತೆ ಅಭಿವೃದ್ಧಿಗೆ ಒತ್ತಾಯಿಸಿ ನೂರಾರು ಸುಟ್ಟಟ್ಟಿ ಗ್ರಾಮಸ್ಥರು ನಡು ರಸ್ತೆಯಲ್ಲಿ ಹೋಮ ಮತ್ತು ಯಜ್ಞ ಪೂಜೆ ಮಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಕಳೆದ 15 ವರ್ಷಗಳಿಂದ ನಿರ್ಮಾಣದ ರಸ್ತೆಗೆ ಡಾಂಬರು ಹಾಕಿಲ್ಲ. ಹೀಗಾಗಿ ಪ್ರತಿದಿನ ಈ ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚಾರ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಅಳಲು ತೊಡಿಕೊಂಡಿದ್ದಾರೆ.
![](https://i0.wp.com/thenewzpeg.com/wp-content/uploads/2022/11/hgggg-1.jpg?resize=800%2C481&ssl=1)
![](https://i0.wp.com/thenewzpeg.com/wp-content/uploads/2022/11/gffff.jpg?resize=800%2C405&ssl=1)
ಸುಟ್ಟಟ್ಟಿ- ಯಲ್ಲಮ್ಮವಾಡಿ ರಸ್ತೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸುಮಾರು 6 ಕಿಲೋಮೀಟ್ ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಕಾಂಗ್ರೆಸ್ ಮುಂಡರು ಸರ್ಕಾರ, ಸ್ಥಳೀಯ ಶಾಸಕ ಮತ್ತು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ. ಸರ್ಕಾರ ಮತ್ತು ಸ್ಥಳೀಯ ಶಾಸಕರಿಗೆ ದೇವರು ಒಳ್ಳೆಯ ಬುದ್ಧಿ ಕೊಟ್ಟು ರಸ್ತೆ ಅಭಿವೃದ್ಧಿ ಪಡಿಸಲಿ ಎಂದು ರಸ್ತೆ ಮೇಲೆ ಹೋಮ ಮಾಡಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.
![](https://i0.wp.com/thenewzpeg.com/wp-content/uploads/2022/11/fdfddd.jpg?resize=800%2C426&ssl=1)
ಗಜಾನನ ಮಂಗಸೂಳಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವಾರು ಗ್ರಾಮಸ್ಥರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.