Amarnath Yatra: ಹವಾಮಾನ ವೈಪರೀತ್ಯದಿಂದ ಅಮರನಾಥ ಯಾತ್ರೆಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಿಎಂ ಸೂಚನೆ

ಬೆಂಗಳೂರು ಜು 8: ಪವಿತ್ರ ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ ಸುರಕ್ಷಿತವಾಗಿ ಮರಳಲು ಅಗತ್ಯ ಎಲ್ಲಾ ನೆರವನ್ನು ನೀಡುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗದಗ್ ನಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 km ದೂರದಲ್ಲಿರುವ ಪಂಚತಾರ್ನಿ ಟೆಂಟ್ ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಅಗತ್ಯ ರಕ್ಷಣಾ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

More News