ನೇಪಾಳ(ಕಠ್ಮಂಡು) : ಶುಕ್ರವಾರ ರಾತ್ರಿ ಸುಮಾರ್ 11.47ಕ್ಕೆ ಸಂಭವಿಸಿದ ಪ್ರಬಲ ಭೂಕಂಪಕ್ಕೆ ನೇಪಾಳ ದೇಶ ನಲುಗಿದ್ದು, ಸುಮಾರು 128 ಜನರು ಇದುವರೆಗೂ ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟವಾಗಿದೆ ಎಂದು ತಿಳಿದುಬಂದಿದೆ.
ನೇಪಾಳದ ಗಡಿ ಭಾಗದಲ್ಲಿ ಈ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ 6.4 ತೀವ್ರತೆಯನ್ನು ಹೊಂದಿತ್ತು ಎಂದು ಅಮೆರಿಕದ ಜಿಯೋಲಜಿಕಲ್ ಸರ್ವೆ ಇಲಾಖೆ ತಿಳಿಸಿದೆ. ಜಜಕೋರ್ಟ್ ನ ರಾಮಿದಂಡಾದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಸಾವು ನೋವಿಗೆ ಪ್ರಧಾನಿ ಪುಷ್ಪ ಕಮಲ್ ದಹಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
जाजरकोटको रामीडाँडा केन्द्रविन्दु भएर शुक्रबार राति ११ः४७ मा गएको भूकम्पबाट भएको मानवीय तथा भौतिक क्षतिप्रति सम्माननीय प्रधानमन्त्री पुष्पकमल दाहाल “प्रचण्ड”ले गहिरो दुख व्यक्त गर्दै घाइतेहरुको तत्काल उद्धार र राहतका लागि ३ वटै सुरक्षा निकायलाई परिचालित गर्नुभएको छ।
— PMO Nepal (@PM_nepal_) November 3, 2023
ಭೂಕಂಪ ಪೀಡಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಟ್ಟಡಗಳ ಅವಶೇಷಗಳಡಿ ಸಿಲುಕಿದವರ ರಕ್ಷಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ನೇಪಾಳದಲ್ಲಿ ಸಂಭವಿಸಿದ ಭೂಕಂಪ ದೆಹಲಿಯೂ ಅನುಭವವಾಗಿದೆ. ಹಾಗೆಯೇ ಉತ್ತರಪ್ರದೇಶದ ಹಲವೆಡೆಯೂ ಅನುಭವವಾಗಿದ್ದು, ಅನೇಕರು ಭೂಮಿ ನಡುಗಿದಂತಾಗಿದೆ ಎಂದು ತಿಳಿಸಿದ್ದಾರೆ. ಕಳೆದ ಒಂದು ತಿಂಗಳಲ್ಲಿ ನೇಪಾಳದಲ್ಲಿ ಮೂರನೇ ಬಾರಿಗೆ ಪ್ರಬಲ ಭೂಕಂಪವಾಗುತ್ತಿದೆ.