HISTORICAL BENGALURU KARAGA: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್ : ಪೂಜಾರಿ ಎ ಜ್ಞಾನೇಂದ್ರ ಅವರೇ ಹೊರಲಿದ್ದಾರೆ ಕರಗ

ಬೆಂಗಳೂರು : ವಿಶ್ವವಿಖ್ಯಾತ ಮತ್ತು ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ದಿನಾಂಕ ನಿಗಧಿಯಾಗಿದೆ. ಏಪ್ರಿಲ್ 15ರಿಂದ ಏಪ್ರಿಲ್ 23 ರವರೆಗೆ ಬೆಂಗಳೂರು ಕರಗ ಮಹೋತ್ಸವ ನಡೆಯಲಿದ್ದು, ಏಪ್ರಿಲ್ 23 ರ ಚೈತ್ರ ಪೂರ್ಣಮಿಯ ದಿನದಂದು ಕರಕ ಮೆರವಣಿಗೆ ನಡೆಯಲಿದೆ.
ಈ ಸಂಬಂಧ ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಹಾಗೂ ಮುಜರಾಯಿ ಇಲಾಖೆ ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಎ ಜ್ಞಾನೇಂದ್ರ ಸ್ವಾಮಿ ಅವರೇ ಈ ಬಾರಿ ಕರಗ ಹೊರಲು ಆಯ್ಕೆ ಮಾಡಲಾಗಿದೆ.

ಕಳೆದ ವರ್ಷ ಕರಗ ಮೆರವಣಿಗೆ ಸಂದರ್ಭದಲ್ಲಿ ಕೆಲವು ಕೆಡಿಗೇಡಿಗಳು ಕರಗದ ಪೂಜಾರಿ ಎ ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿ ಕರಗಕ್ಕೆ ಅಡ್ಡಿಪಡಿಸಲು ಮುಂದಾಗಿದ್ದರು. ಆದರೆ, ಪೂಜಾರಿ ಜ್ಞಾನೇಂದ್ರ ಅವರು ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿಯಲ್ಲಿ ಉತ್ಸವ ಮುಗಿಸಿ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ತಲುಪಿಸಿದ್ದರು.

More News

You cannot copy content of this page