ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಪೋಟ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ರಾಜ್ಯದಲ್ಲಿ ಇಸ್ಲಾಮಿಕ್ ಮೂಲಭೂತವಾದ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಎಸ್ ಡಿಪಿ ಮತ್ತು ಪಿಎಫ್ ಐ ಮೇಲಿನ ಕೇಸ್ ವಾಪಸು ಪಡೆದು ಕಾಂಗ್ರೆಸ್ ಸರ್ಕಾರ ಅವರ ಪರವಾಗಿ ಇದೆ ಅಂತ ತೋಸಿದ್ದರು. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರ ಮೇಲೆ ಯಾವುದೇ ಕ್ರಮ ಇಲ್ಲ. ರಾಜ್ಯದ ಸಾಮಾನ್ಯ ಜನರ ಬದಕು ಅಸುರಕ್ಷಿತವಾಗಿದೆ. ಕಟರ್ ಇಸ್ಲಾಮಿಕ್ ಮೂಲಭೂತವಾದಿಗಳಿಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿದೆ. ಇದಕ್ಕೆ ನೇರವಾಗಿ ಸಿಎಂ ಸಿದ್ದರಾಮಯ್ಯ ಅವರೇ ಕಾರಣ ಎಂದು ಆರೋಪಿಸಿದರು.
ಎಲ್ಲಾ ಗಾಯಗಳುಗಳ ಆರೋಗ್ಯ ಬೇಗ ಸುಧಾರಿಸಲಿ. ಉಗ್ರರಿಗೆ ಕರ್ನಾಟಕ ಸ್ವರ್ಗವಾಗಿದೆ. ಮೂಲಭೂತವಾದಿಗಳಿಗೆ ಮತ್ತು ಉಗ್ರರಿಗೆ ಇದು ಸುರಕ್ಷಿತ ಅನ್ನಿಸುತ್ತಿದೆ. ಈ ನಾನ್ಸೆನ್ಸ್ ಅಪ್ರೋಚ್ ನನ್ನು ಸಿದ್ದರಾಮಯ್ಯ ನಿಲ್ಲಿಸಬೇಕು. ಕೆಲವು ಪೊಲೀಸ್ ಇಲಾಖೆ ರಾಜ್ಯಗಳಲ್ಲಿ ಉಗ್ರವಾದಿಗಳಿಗೆ ಸೇಫ್ ಹಾವೆನ್ ಕೊಟ್ಟಿದ್ದಾರೆ. ತುಷ್ಟಿಕರಣ ನೀತಿಯಿಂದ ಈ ರೀತಿಯಲ್ಲಿ ಘಟನೆ ಆಗುತ್ತಿವೆ. ನಾಸಿರ್ ಹುಸೇನ್ ಗೆ ನಾಚಿಕೆ ಆಗಬೇಕು. ಪ್ರಕರಣವನ್ನು ಎನ್ ಐಎ ತನಿಖೆ ನೀಡಲು ನನ್ನ ಆಗ್ರಹವಿದೆ. ಯಾವುದಕ್ಕೆ ನಾವು ರಾಜ್ಯ ಸರ್ಕಾರಕ್ಕೆ ಸಹಕಾರ ನೀಡಬೇಕು. ಈ ಸರ್ಕಾರ ಭಯೋತ್ಪಾದಕತೆ ನಿಲ್ಲಿಸುತ್ತವೆ ಅಂದ್ರೆ ಮಾತ್ರ ಸಹಕಾರ ನೀಡುತ್ತೇವೆ. ಇವರು ನಮ್ಮಿಂದ ಏನು ಬಯಸುತ್ತಿದ್ದಾರೆ. ಇದು ಹೇಡಿ, ನಾಚಿಕೆಗೇಡಿನ ಕೃತ್ಯ. ನೀವು ಓಟ್ ಬ್ಯಾಂಕ್ ಗಾಗಿ ದೇಶವನ್ನು ಅಭದ್ರ ಮಾಡುತ್ತಿದ್ದಿರಿ. ಜಿಹಾದಿ ರಾಜಕೀಯಕ್ಕೆ ನಾವು ಬೆಂಬಲ ನೀಡಬೇಕಾ ಎಂದು ಪ್ರಶ್ನಿಸಿದರು.

ಇದೊಂದು ಅತ್ಯಂತ ಅಯೋಗ್ಯ ಸರ್ಕಾರ.ಈ ರೀತಿಯ ಚಿಲ್ಲರೆ, ತುಷ್ಟ ರಾಜಕೀಯ ನಿಲ್ಲಿಸಬೇಕು.
ಯಾವುದೇ ಪೂರ್ವ ತಯಾರಿಲ್ಲದೆ ಜಾತಿಗಣತಿ ಮಾಡಿದ್ದಾರೆ. ಮೊದಲು ಕಾಂಗ್ರೆಸ್ ನಿಲವು ಸ್ಪಷ್ಟ ಪಡಸಲಿ.
ಆಮೇಲೆ ಬಿಜೆಪಿ ನಿಲುವು ತಿಳಿಸುತ್ತೇವೆ ಎಂದರು. ನಾನು ಈಗಾಗಲೇ ನಾನು ಸಾಕಷ್ಟು ಚುನಾವಣಾ ತಯಾರಿ ಮಾಡಿದ್ದೆನೆ. ನನಗೆ ಎಲ್ಲಾ ವರ್ಗದ ಬೆಂಬಲ ಇದೆ ಎಂದರು.