Search

NIRANJAN HIREMATH: ಸರ್ಕಾರಕ್ಕೆ ಹಾಗೂ ಪೊಲೀಸ್ ಆಯುಕ್ತರಿಗೆ ಕ್ಷಮೆಯಾಚಿಸಿದ ನೇಹಾಳ ತಂದೆ ನಿರಂಜನಯ್ಯ

ಹುಬ್ಬಳ್ಳಿ: ಸರ್ಕಾರ ತಕ್ಷಣ ಸ್ಪಂದಿಸಿದೆ ಮಾಹಿತಿ ಕೊರತೆಯಿಂದ ಸರ್ಕಾರದ ವಿರುದ್ಧ ಹೇಳೆಕೆ ಕೊಟ್ಟಿದ್ದೇವೆ. ಅಲ್ಲದೇ ಪೊಲೀಸ್ ಆಯುಕ್ತರ ವಿರುದ್ಧವೂ ಮಾತನಾಡಿದ್ದೇನೆ. ದುಃಖದಲ್ಲಿ ಮಾಹಿತಿ ಕೊರತೆಯಿಂದ ಮಾತನಾಡಿದ್ದೇನೆ ಎಂದು ಸರ್ಕಾರಕ್ಕೆ ಹಾಗೂ ಪೊಲೀಸ್ ಆಯುಕ್ತರಿಗೆ ಮೃತಳ ತಂದೆ ನಿರಂಜನಯ್ಯ ಹಿರೇಮಠ ಕ್ಷಮೆಯಾಚನೆ ಮಾಡಿದ್ದಾರೆ.

ಸಚಿವ ಎಚ್.ಕೆ.ಪಾಟೀಲ ಭೇಟಿ ವೇಳೆ ಮಾತನಾಡಿದ ಅವರು, ಸ್ಥಳೀಯ ಶಾಸಕರು, ಜಿಲ್ಲಾಧ್ಯಕ್ಷರು ಎಲ್ಲ ಮುಖಂಡರು ನಮ್ಮ ಪರ ನಿಂತಿದ್ದಾರೆ. ವಿಶೇಷ ನ್ಯಾಯಾಲಯ ಸ್ಥಾಪನೆ ನಿರ್ಣಾಯಕ್ಕೆ ಧನ್ಯವಾದ ಹೇಳ್ತೇನೆ. ಕಾನೂನಿನ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಬೆನ್ನ ಹಿಂದೆ ಸರ್ಕಾರ ಕೆಲಸ ಮಾಡಿದೆ ಎಂದರು.

ಸಿಎಂ ಸಾಂತ್ವನ ಹೇಳಲು ಬರೋದಾಗಿ ಹೇಳಿದ್ದಾರೆ. ನಾನು ತಪ್ಪಾಗಿ ಮಾತನಾಡಿದ್ದರೆ ಕ್ಷಮಿಸಿ. ಪೊಲೀಸ್ ಆಯುಕ್ತರ ಬಗ್ಗೆಯೂ ತಪ್ಪಾಗಿ ಮಾತನಾಡಿದ್ದೇನೆ. ದುಃಖದಲ್ಲಿ ಮಾತನಾಡಿದ್ದೇನೆ,‌ ನನ್ನ ಎಲ್ಲರು ಕ್ಷಮಿಸಿ ಎಂದು ಅವರು ವಿನಂತಿಸಿದರು.

ವಿಶೇಷ ಕೋರ್ಟ್ ಗೆ ನೇಹಾ ಹಿರೇಮಠ್ ಅಂತ ಹೆಸರಿಡಬೇಕು, ಕಾಯ್ದೆ ಗೂ ಅವರ ಹೆಸರಿಡಿ. ನೇಹಾ ಳ ಸಾವಿಗೆ ನ್ಯಾಯ ಸಿಗಬೇಕು. ಈಗ ಸಿಐಡಿ ತನಿಖೆಗೆ ಕೊಟ್ಟಿದ್ದಾರೆ. ಅವರು ಹೇಗೆ ತನಿಖೆ ಮಾಡ್ತಾರೋ ಮೊದಲು ಮಾಡಲಿ. ಪೊಲೀಸ್ ಇಲಾಖೆ ಸರಿಯಾಗಿ ತನಿಖೆ ಮಾಡ್ತಿಲ್ಲ ಅಂತ ಆರೋಪ ಮಾಡಿದ್ದೆ. ನಿಷ್ಪಕ್ಷವಾಗಿ ತನಿಖೆ ನಡೆದಿರೋದು ನನಗೆ ಗೊತ್ತಾಗಿದೆ. ಮಾಹಿತಿ ಕೊರತೆಯಿಂದ ಮಾತನಾಡಿದ್ದೇನೆ. ಪೊಲೀಸ್ ಇಲಾಖೆಯ ಕ್ಷಮೆ ಕೇಳ್ತೇನೆ. ಆತಂಕದಲ್ಲಿ ನಾನು ಕೆಲ ಹೇಳಿಕೆ ನೀಡಿದೆ. ಕಾಣದ ಕೈ ರೀತಿಯಲ್ಲಿ ಕೆಲಸ ಮಾಡಿದ್ದಾರೆ ಎಂದರು.

ಕಾಂಗ್ರೆಸ್ ನಾಯಕರೆಲ್ಲರಿಗೂ ಧನ್ಯವಾದ ಹೇಳುತ್ತೇನೆ. ವಿದ್ಯಾರ್ಥಿನಿಯರು ನಿರ್ಭಯವಾಗಿ ಕಾಲೇಜಿಗೆ ಹೋಗುವಂತಾಗಬೇಕು ಅನ್ನೋದೇ ನನ್ನ ಆಸೆ ಎಂದು ಅವರು ಹೇಳಿದರು.

More News

You cannot copy content of this page