Search

Five Students Drowned In Water: ನೀರಿನಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳು ಸಾವು

ಬೆಂಗಳೂರು. ವಿಹಾರಕ್ಕೆ ತೆರಳಿದ್ದ ಐವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತಪಟ್ಟ ಎಲ್ಲರೂ ಬೆಂಗಳೂರಿನ ಖಾಸಗಿ ಕಾಲೇಜಿನ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಕನಕಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೇಕೆದಾಟು ಸಂಗಮದಲ್ಲಿ ಈ ದುರಂತ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿನಿಯರು ಮತ್ತು ಮೂವರು ವಿದ್ಯಾರ್ಥಿಗಳು ಜಲ ಸಮಾಧಿಯಾಗಿದ್ದಾರೆ. ಇಂದು ಮಧ್ಯಾಹ್ನ ಈ ದುರಂತ ಸಂಭವಿಸಿದೆ. ಮನೆಯಲ್ಲಿ ತಿಳಿಸದೆ ಎಲ್ಲ ವಿದ್ಯಾರ್ಥಿಗಳು ಮೇಕೆದಾಟಿಗೆ ಬಂದಿದ್ದಾರೆ ಎಂದು ಶಂಕಿಸಲಾಗಿದೆ.
ಇದೀಗ ಐವರು ವಿದ್ಯಾರ್ಥಿಗಳ ಮೃತದೇಹಗಳನ್ನು ನೀರಿನಿಂದ ಹೊರತೆಗೆಯಲಾಗಿದೆ. ಮೃತ ವಿದ್ಯಾರ್ಥಿಗಳ ಗುರುತು ಇದುವರೆಗೆ ಪತ್ತೆಯಾಗಿಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ

More News

You cannot copy content of this page