ಬೆಂಗಳೂರು : ನಮ್ಮ ರಾಜ್ಯದಿಂದ ಬಿಜೆಪಿ ಜೆಡಿಎಸ್ ನಿಂದ ಆಯ್ಕೆ ಆಗಿರುವ 19 ಸಂಸದರಿಗೆ ಸನ್ಮಾನ ಮಾಡಲಾಗುವುದು ಎಂದುಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈವಿಜಯೇಂದ್ರ ಅವರು ಹೇಳಿದರು
ಕೇಂದ್ರದ ಸಚಿವ ಸಂಪುಟಕ್ಕೆ ಆಯ್ಕೆಯಾದ ಸಚಿವರಿಗೆ ಅಭಿನಂದನಾ ಕಾರ್ಯಕ್ರಮವೂ ಇರಲಿದೆ
ಚನ್ನಪಟ್ಟಣದಲ್ಲಿ ಡಿಕೆಶಿ ಸ್ಪರ್ಧೆ ವಿಚಾರ
ಡಿಕೆಶಿ ಅವರು ಈಗಾಗಲೇ ಶಾಸಕರು ಇದ್ದಾರೆ. ಆದರೂ ಚನ್ನಪಟ್ಟಣದಲ್ಲಿ ಸ್ಪರ್ಧೆಯ ಅಭಿಲಾಷೆ ವ್ಯಕ್ತಪಡಿಸಿದ್ದಾರೆ .ಇದು ಅವರ ಪಕ್ಷದ ತೀರ್ಮಾನ. ಆದರೂ ಜನರ ಮನದಾಳದಲ್ಲಿ ಏನಿದೆ ಅನ್ನೋದು ಇನ್ನೂ ನಿಗೂಢವಾಗಿದ. ಬೆಂಗಳೂರು ಗ್ರಾಮೀಣ ಕ್ಷೇತ್ರದಲ್ಲಿ ತಮ್ಮನ್ನು ಸೋಲಿಸೋರೇ ಇಲ್ಲ ಅಂತ ಅವರು ಅನ್ಕೊಂಡಿದ್ರು
ಆದರೆ ಜನರ ತೀರ್ಪು ಏನಿತ್ತು ಅಂತ ಎಲ್ರೂ ನೋಡಿದ್ದೀರ. ಚನ್ನಪಟ್ಟಣ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಯಾರಾಗಬೇಕು ಅಂತ ನಾವು ಮತ್ತು ಜೆಡಿಎಸ್ ನಾಯಕರು ಅತೀ ಶೀಘ್ರದಲ್ಲೇ ತೀರ್ಮಾನ ಮಾಡುತ್ತೇವೆ ಅಂತ ಹೇಳಿದರು
ದಾವಣಗೆರೆ ಸೋಲಿಗೆ ಯಡಿಯೂರಪ್ಪ, ವಿಜಯೇಂದ್ರ ಕಾರಣ ಎಂಬ ಶಾಸಕ ಬಿ ಪಿ ಹರೀಶ್ ಹೇಳಿಕೆ ವಿಚಾರ
ಬಿಜೆಪಿ ಶಾಸಕ ಬಿ ಪಿ ಹರೀಶ್ ಗೆ ವಿಜಯೇಂದ್ರ ತಾಕೀತು. ನಮ್ಮ ಶಾಸಕ ಮಿತ್ರ ಹರೀಶ್ ಆಗಲೀ ಅಥವಾ ಬೇರೆ ಯಾರೇ ಆಗಲೀ ಅವರಿಗೆ ಒಂದು ಮಾತು ಹೇಳ್ತೇನೆ. ಬಹಿರಂಗವಾಗಿ ಹೇಳಿಕೆ ಕೊಡೋದ್ರಿಂದ ಸಮಸ್ಯೆಗೆ ಪರಿಹಾರ ಸಿಗುತ್ತೆ ಅಂದ್ರೆ ಹೇಳಲಿ, ನನ್ನದೇನೂ ತಕರಾರಿಲ್ಲ. ಆದರೆ ನಾನು ರಾಜ್ಯಾಧ್ಯಕ್ಷ ಆಗಿ ಮನವಿ ಮಾಡೋದು, ಏನೇ ಸಮಸ್ಯೆ ಇದ್ರೂ ಪಕ್ಷದ ಕಚೇರಿಗೆ ಬಂದು ಚರ್ಚೆ ಮಾಡಿ ಈ ರೀತಿ ಹೇಳಿಕೆ ಕೊಡೋದರಿಂದ ಅದು ಪಕ್ಷಕ್ಕೂ ಲಾಭ ಆಗಲ್ಲ. ಸಂಘಟನೆಗೂ ಲಾಭ ಆಗಲ್ಲ. ಬಿಜೆಪಿಯಲ್ಲಿ ಗುಂಪುಗಾರಿಕೆ ಜಾಸ್ತಿ ಆಗುತ್ತಿಲ್ಲ, ಎಲ್ಲವನ್ನೂ ಸರಿ ಮಾಡುತ್ತೇವೆ ಅಂತ ಹೇಳಿದರು
ರಾಜ್ಯದ ಹಣಕಾಸು ವ್ಯವಸ್ಥೆ ಮೇಲುಸ್ತುವಾರಿಗೆ ವಿದೇಶಿ ಕನ್ಸಲ್ಟೆನ್ಸಿ ನೇಮಕ ವಿಚಾರ
ಇದು ಆಶ್ಚರ್ಯ ಮತ್ತು ಶಾಕಿಂಗ್ ಕೂಡಾ. ಸಿಎಂ ಸುತ್ತ ಅಷ್ಟು ತಜ್ಞ ಅಧಿಕಾರಿಗಳು ಇರುವಾಗ ವಿದೇಶಿ ಕನ್ಸಲ್ಟೆನ್ಸಿ ಆಯ್ಕೆ ಮಾಡಿದ್ದಾರೆ. ಕಳೆದ ಒಂದು ವರ್ಷದಿಂದ ಸಿದ್ದರಾಮಯ್ಯ ಸರ್ಕಾರ ಎಲ್ಲಾ ವಿಧದಲ್ಲೂ ವಿಫಲ ಆಗಿದೆ. ಒಂದು ವರ್ಷದಿಂದ ಯಾವುದೇ ಅಭಿವೃದ್ಧಿ ಇಲ್ಲ, ಹೂಡಿಕೆ ಬಂದಿಲ್ಲ. ಕರ್ನಾಟಕ ಸಿದ್ದರಾಮಯ್ಯ ನಾಯಕತ್ವದಲ್ಲಿ ಬಳಲುತ್ತಿದೆ. ಯಾಕೆ ಸಿದ್ದರಾಮಯ್ಯ ನಮ್ಮ ರಾಜ್ಯದಿಂದಲೇ ಸೂಕ್ತ ವ್ಯಕ್ತಿಯನ್ನು ಗುರುತಿಸಲಿಲ್ಲ?. ಹಲವು ಹಿರಿಯ ಐಎಎಸ್ ಅಧಿಕಾರಿಗಳು ಇದ್ದಾರೆ. ಯಡಿಯೂರಪ್ಪ, ಎಸ್ ಎಂ. ಕೃಷ್ಣ ಇವರೆಲ್ಲಾ ಸಿಎಂ ಆಗಿದ್ದಾಗ ಕರ್ನಾಟಕ ಎಲ್ಲಾ ಹಂತದಲ್ಲೂ ಮುಂದಿತ್ತು. ಯಾವುದೇ ವಿದೇಶಿ ತಜ್ಞರು ಸಿದ್ದರಾಮಯ್ಯಗೆ ಸಹಕಾರ ಮಾಡುತ್ತಾರೆ ಅಂತಾ ನನಗೆ ಅನ್ನಿಸುತ್ತಿಲ್ಲ. ಸಿದ್ದರಾಮಯ್ಯ ಕರ್ನಾಟಕವನ್ನು ಅಭಿವೃದ್ಧಿಶೀಲ ರಾಜ್ಯ, ರಾಜ್ಯಕ್ಕೆ ಸಂಪನ್ಮೂಲ ಹೂಡಿಕೆ ಬರುವುದನ್ನು ಬಯಸುತ್ತಾರೋ ಇಲ್ಲವೋ ಎಂಬುದನ್ನು ರಾಜ್ಯಕ್ಕೆ ಸ್ಪಷ್ಟಪಡಿಸಬೇಕು ಅಂತ ಆಗ್ರಹ ಮಾಡಿದರು