ಸುವರ್ಣ ಸೌಧ (ಬೆಳಗಾವಿ): ರಾಜ್ಯದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಡಿಸೆಂಬರ್ 9 ರಿಂದ ಡಿಸೆಂಬರ್ 20 ರವರೆಗೆ ನಿಗದಿಯಾಗಿರುವ ವಿಧಾನಮಂಡಲ ಅಧಿವೇಶನವು ಈ ಬಾರಿಯು ಸಹ ಮಾದರಿಯಾಗುವ ರೀತಿಯಲ್ಲಿ ನಡೆಯಲು ಎಲ್ಲರ ಸಹಕಾರ ಕೋರುವೆ ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಹೇಳಿದರು.
ಸುವರ್ಣಸೌಧದಲ್ಲಿ ನಡೆದ ಸುದ್ದಿಗೋಷ್ಢಿಯನ್ನು ಉದ್ಧೇಶಿಸಿ ಮಾತನಾಡಿದ ಅವರು,ಡಿಸೆಂಬರ್ 09 ರಂದು ಮೊದಲ ದಿನ ಬೆಳಗ್ಗೆ 11ರಿಂದ ಅಧಿವೇಶನವು ವಿದ್ಯುಕ್ತವಾಗಿ ಆರಂಭ ವಾಗಲಿದೆ.ಇದಕ್ಕು ಮೊದಲು 10.30ಕ್ಕೆ ಐತಿಹಾಸಿಕ
ಅನುಭವ ಮಂಟಪ ಸ್ಮರಣೆಯ ಬೃಹತ್ ತೈಲ ವರ್ಣದ ಚಿತ್ರದ ಅನಾವರಣ ವನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡುವರು.
ವಿಧಾನಸಭೆಯ ಸಭಾಧ್ಯಕ್ಷರು,ವಿಧಾನ ಪರಿಷತನ ಸಭಾಪತಿಗಳು, ಉಪ ಸಭಾಪತಿಗಳು,ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಹಲವಾರು ಗಣ್ಯರು ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.
ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ವಿಧಾನಸಭೆ ಸದಸ್ಯರಿಗೆ ಪ್ರಮಾಣ ವಚನ ಬೋಧನೆ ನಡೆಯಲಿದೆ.
ಮಧ್ಯಾಹ್ನ ಬಿಎಸ್ ಸಿ (ಕಲಾಪ ಸಲಹಾ ಸಮಿತಿ) ಸಭೆ ನಡೆಯಲಿದ್ದು,ಈ ಸಭೆಯಲ್ಲಿ ಅಧಿವೇಶನದ ಕಾರ್ಯಕಲಾಪಗಳು ಚೆರ್ಚಾ ವಿಷಯಗಳು,ವಿಧೇಯಕಗಳ ಬಗ್ಗೆ ಸಮಗ್ರ ಚರ್ಚಿಸಿ ಅಂತಿಮ ಗೊಳಿಸ ಲಾಗುವುದು ಎಂದರು.
ಈ ಬಾರಿ ಅಧಿವೇಶನದಲ್ಲಿ
5 ವಿಧೇಯಕಗಳ ಮೇಲೆ ಸುಧೀರ್ಘ ಚರ್ಚೆ ನಡೆಯಲಿದೆ.ಎರಡು ಆಧ್ಯಾದೇಶದ ಬದಲಿ ವಿಧೇಯಕಗಳನ್ನು ಪರ್ಯಾಲೋಚನೆಗೆ ತೆಗೆದುಕೊಳ್ಳಲಾಗುವುದು.
ಅಧಿವೇಶನದಲ್ಲಿ 10 ದಿನಗಳ ಕಾಲ ಪ್ರಶ್ನೋತ್ತರ ಅವಧಿ ನಿಗದಿಪಡಿಸಲಾಗಿದೆ. ಗಮನ ಸೆಳೆಯುವ ಸೂಚನೆಗಳು,ಶೂನ್ಯ ವೇಳೆ, ನಿಲುವಳಿ ಸೂಚನೆ ನಡೆಸಲಾಗುವುದು.
ಈವರೆಗೆ 3004 ಪ್ರಶ್ನೆಗಳು, 205 ಗಮನ ಸೆಳೆಯುವ ಸೂಚನೆಗಳು, 96 ನಿಯಮ 351ರ ಸೂಚನೆಗಳನ್ನು ಸ್ವೀಕರಿಸಲಾಗಿದೆ.ಜತೆಗೆ 3 ಖಾಸಗಿ ವಿಧೇಯಕಗಳನ್ನು ಸಹ ಸ್ವೀಕರಿಸಲಾಗಿದೆ ಎಂದರು.
ನಮ್ಮೆಲ್ಲರ ಸ್ವಾಭಿಮಾನದ ಊರಾದ ಬೆಳಗಾವಿಯ
ಸುವರ್ಣಸೌಧದಲ್ಲಿ ಪರಂಪರೆಯಂತೆ ಪ್ರತಿ ವರ್ಷ ನಡೆಯಲಿರುವ ಈ ವಿಶೇಷ ಅಧಿವೇಶನದಲ್ಲಿ ಭಾಗಿಯಾಗಿ ಅಧಿವೇಶನದ ಯಶಸ್ಸಿಗೆ ಸಹಕಾರ ನೀಡುವ ನಾನಾ ಪತ್ರಿಕೆಗಳು ಮತ್ತು ಸುದ್ದಿವಾಹಿನಿಗಳ ಪ್ರತಿನಿಧಿಗಳಿಗೆ ವಸತಿ, ಊಟ,ಆಸನದ ವ್ಯವಸ್ಥೆಗೆ ಹೆಚ್ಚಿನ ಒತ್ತು ಕೊಡಲಾಗಿದೆ. ಕಲಾಪದಲ್ಲಿ ಲಿಖಿತ ಪ್ರಶ್ನೆಗಳಿಗೆ ಉತ್ತರ ಪಡೆಯುವ ಪ್ರಕ್ರಿಯೆ ಸೇರಿದಂತೆ ನಾನಾ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ ಎಂದರು.
ಬೆಂಗಳೂರಿನ ವಿಧಾನಸೌಧದ ವಿಧಾನಸಭೆಯ ಮೊಗಸಾಲೆಯಲ್ಲಿ ಇರುವ ಮಾದರಿಯಲ್ಲಿಯೇ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಈ ಬಾರಿ ಹೊಸದಾಗಿ ಸಭಾಧ್ಯಕ್ಷರ ಪೀಠವನ್ನು ಸಿದ್ದಪಡಿಸ ಲಾಗಿದೆ ಎಂದರು. ಅಧಿವೇಶನದ ಕಾರ್ಯ ವ್ಯವಸ್ಥೆಗಾಗಿ 2500 ಅಧಿಕಾರಿಗಳು,ಸಿಬ್ಬಂದಿ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತಗಾಗಿ
ಅಂದಾಜು 6000 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿ ಒಟ್ಟು 8500 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.
ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ 10 ಸಮಿತಿಗಳನ್ನು ರಚಿಸಿ ವಸತಿ, ಸಾರಿಗೆ ಸೇರಿದಂತೆ ನಾನಾ ವ್ಯವಸ್ಥೆ ಮಾಡಲಾಗಿದೆ ಎಂದರು.
ಸುವರ್ಣಸೌಧ ಕಲಾಪ ವೀಕ್ಷಣೆಗೆ ಬರುವ ವಿಧ್ಯಾರ್ಥಿಗಳಿಗೆ,ಮಕ್ಕಳಿಗೆ ಅನುಕೂಲವಾಗಲು
ಮುಖ್ಯದ್ವಾರದಿಂದ ಸೌಧದ ಕಟ್ಟಡದವರೆಗೆ ಎಲೆಕ್ಟ್ರಿಕ್ ವಾಹನ, ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.
ಕಲಾಪ ವೀಕ್ಷಣೆಗೆ ಆಗಮಿಸುವ
ವಿದ್ಯಾರ್ಥಿ,ಶಿಕ್ಷಕರಿಗೆ ಮಾಹಿತಿಗಾಗಿ ಬೆಳಗಾವಿ ಯಲ್ಲಿ 1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ದಶಮಾನೋತ್ಸವ ನೆನಪಿನ ಛಾಯಾಚಿತ್ರಗಳ ಪ್ರದರ್ಶನಕ್ಕೆ ಏರ್ಪಾಡು ಮಾಡಲಾಗಿದೆ ಎಂದರು.
ಇದಕ್ಕಾಗಿ ಮಹಾತ್ಮ ಗಾಂಧೀಜಿಯವರ ಅಪರೂಪದ ಭಾವಚಿತ್ರ ಗಳನ್ನು ಸಂಗ್ರಹಿಸಿ ಸುವರ್ಣಸೌಧದ ಆಯಾ ಕಡೆಗಳಲ್ಲಿ ಹಾಕಲಾಗಿದೆ ಎಂದು ವಿವರಿಸಿದರುಮ