ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಚುನಾವಣಾ ಪ್ರಚಾರದಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೆದರಿದ್ದಾರೆ ಎಂದು ಬಿಜೆಪಿ ವ್ಯಾಖ್ಯಾನ ಮಾಡಿದೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಬಿಜೆಪಿ ನಮ್ಮ ಮಾರ್ಗದರ್ಶಕರಾದ ಬಿಎಸ್ ಯಡಿಯೂರಪ್ಪ ಅವರು ಪ್ರಚಾರವನ್ನು ಈಗಷ್ಟೇ ಆರಂಭಿಸಿದ್ದಾರೆ. ಅದಾಗಲೇ ಕಾಂಗ್ರೆಸ್ ಕಕ್ಕಾಬಿಕ್ಕಿಯಾಗಿದೆ, ಸಿದ್ದರಾಮಯ್ಯ ಬೆದರಿದ್ದಾರೆ ಎಂದಿದೆ.
ಸಿದ್ದರಾಮಯ್ಯ & ಡಿಕೆಶಿ ನಡುವೆ ಕಂದಕ..!
ಸಿದ್ದರಾಮಯ್ಯ & ಡಿಕೆಶಿ ನಡುವೆ ಕಂದಕ ಸೃಷ್ಟಿಯಾಗಿದೆ. ಸಿಎಲ್ಪಿ ನಾಯಕರಿಗೂ ಹೇಳದೆ ಟಿಕೆಟ್ ಫೈನಲ್ ಮಾಡುತ್ತೇನೆ ಎಂದುಡಿಕೆಶಿ ಅಬ್ಬರಿಸಿದ್ದರು. ಸಿದ್ದರಾಮಯ್ಯನವರಿಗೆ ಒಮ್ಮೆ ಅವಕಾಶ ನೀಡಿ, ಅವರ ನೇತೃತ್ವದಲ್ಲಿ ಚುನಾವಣೆ ಸೋತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದು ಮರೆತು ಹೋಯಿತೇ ಭಯ ಎನ್ನುವುದು ಮೋದಿ ಸರ್ಕಾರಕ್ಕೆ ಇರುತ್ತಿದ್ದರೆ, ಆರ್ಟಿಕಲ್ 370 ರದ್ದು, CAA ಕಾನೂನು, ರಾಮಮಂದಿರ ನಿರ್ಮಾಣ, ಟ್ರಿಪಲ್ ತಲಾಕ್ ರದ್ದು, ಸರ್ಜಿಕಲ್ ಸ್ಟ್ರೈಕ್ ಸಾಧ್ಯವಾಗುತ್ತಿರಲಿಲ್ಲ ಎಂದು ತಿರುಗೇಟು ನೀಡಿದೆ.
ಸಿದ್ದರಾಮಯ್ಯ ಅವರೇ, ಇವೆಲ್ಲವನ್ನೂ ವಿರೋಧಿಸಿದ ದೇಶದೊಳಗಿನ ದ್ರೋಹಿಗಳಿಂದ ನಮಗೆ ಭಯ ಕಾಡುತ್ತಿರುವುದು ನಿಜ. ಜನಸಂಕಲ್ಪ ಯಾತ್ರೆ ಆರಂಭದಲ್ಲೇ ಹೀಗಾದರೆ, ಮುಂದೆ ಹೇಗೆ ಸಿದ್ದರಾಮಯ್ಯ? ಎಂದು ಪ್ರಶ್ನಿಸಿದೆ.
ಬಿಜೆಪಿ ಸರ್ಕಾರ ಮಾಡಿದ ಮೀಸಲಾತಿ ಹೆಚ್ಚಳ ಕಾಂಗ್ರೆಸ್ ಗೆ ಬಿಸಿತುಪ್ಪವಾಗಿ ಪರಿಣಮಿಸಿದೆ
ದಶಕಗಳಿಂದ ವಿದೂಷಕನಾಗಿ ದೇಶದ ಜನರನ್ನು “ಅಪ್ರಬುದ್ಧ ಬಾಲಕ” ನಗಿಸುತ್ತಿದ್ದಾನೆ. ಸಿದ್ದರಾಮಯ್ಯನವರೇ, ಬಟಾಟೆಯಿಂದ ಚಿನ್ನ ತೆಗೆಯುವವ ವಿದೂಷಕನಲ್ಲದೆ ಮತ್ತೇನು? ಅಧಿಕಾರವಿದ್ದಾಗ ಪರಿಶಿಷ್ಟ ವರ್ಗದ ಬೇಡಿಕೆಯನ್ನು ಮನ್ನಿಸದೆ ಕಾಲಹರಣ ಮಾಡಿದ್ದಸಿದ್ದರಾಮಯ್ಯ ಅವರಿಗೆ ಈಗಬಸವರಾಜ ಬೊಮ್ಮಾಯಿ ಸರ್ಕಾರ ಮಾಡಿದ ಮೀಸಲಾತಿ ಹೆಚ್ಚಳ ಬಿಸಿತುಪ್ಪವಾಗಿ ಪರಿಣಮಿಸಿದೆ ಎಂದು ವಾಗ್ದಾಳಿ ನಡೆಸಿದೆ.
ಪರಿಶಿಷ್ಟ ವರ್ಗದವರ ಏಳಿಗೆ ಸಹಿಸದಕಾಂಗ್ರೆಸ್ ಮೀಸಲಾತಿ ಹೆಚ್ಚಳವನ್ನು ವಿರೋಧಿಸುತ್ತಿತ್ತು. ಏಕೆ ಈ ದಲಿತ ವಿರೋಧಿ ಮನೋಸ್ಥಿತಿ? ಬಿಜೆಪಿ ಸರ್ಕಾರ ಪರಿಶಿಷ್ಟ ವರ್ಗದ ಮೀಸಲಾತಿಯನ್ನು ಹೆಚ್ಚಳ ಮಾಡಿದ್ದೇ ತಡಸಿದ್ದರಾಮಯ್ಯ ಮತ್ತುಕಾಂಗ್ರೆಸ್ ಪಕ್ಷದ ನಾಯಕರಿಗೆ ಬೆವರಿಳಿಯತೊಡಗಿದೆ. ಸಿದ್ದರಾಮಯ್ಯ ಅವರೇ, ತಾವು ಓಟ್ ಬ್ಯಾಂಕ್ ಆಗಿ ಬಳಸಿದ್ದ ದಲಿತ ಸಮುದಾಯ ಬಿಜೆಪಿ ಪಕ್ಷದೊಂದಿಗೆ ಕೈ ಜೋಡಿಸುತ್ತಿರುವುದು ಸಹಿಸಿಕೊಳ್ಳಲಾಗುತ್ತಿಲ್ಲವೇ? ಎಂದು ಪ್ರಶ್ನೆ ಮಾಡಿದೆ.
#STATE BJP #SIDDARAMAIAH #B S YEDIYURAPP #FORMER CM #DK SHIVAKUMAR
BJP v/s SIDDARAMAIAH: ಬಿಎಸ್ವೈ ಚುನಾವಣಾ ಪ್ರಚಾರದಿಂದ ಸಿದ್ದರಾಮಯ್ಯ ಬೆದರಿದ್ದಾರೆ: ಬಿಜೆಪಿ ವ್ಯಾಖ್ಯಾನ
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಚುನಾವಣಾ ಪ್ರಚಾರದಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೆದರಿದ್ದಾರೆ ಎಂದು ಬಿಜೆಪಿ ವ್ಯಾಖ್ಯಾನ ಮಾಡಿದೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಬಿಜೆಪಿ ನಮ್ಮ ಮಾರ್ಗದರ್ಶಕರಾದ ಬಿಎಸ್ ಯಡಿಯೂರಪ್ಪ ಅವರು ಪ್ರಚಾರವನ್ನು ಈಗಷ್ಟೇ ಆರಂಭಿಸಿದ್ದಾರೆ. ಅದಾಗಲೇ ಕಾಂಗ್ರೆಸ್ ಕಕ್ಕಾಬಿಕ್ಕಿಯಾಗಿದೆ, ಸಿದ್ದರಾಮಯ್ಯ ಬೆದರಿದ್ದಾರೆ ಎಂದಿದೆ.
ಸಿದ್ದರಾಮಯ್ಯ & ಡಿಕೆಶಿ ನಡುವೆ ಕಂದಕ..!
ಸಿದ್ದರಾಮಯ್ಯ & ಡಿಕೆಶಿ ನಡುವೆ ಕಂದಕ ಸೃಷ್ಟಿಯಾಗಿದೆ. ಸಿಎಲ್ಪಿ ನಾಯಕರಿಗೂ ಹೇಳದೆ ಟಿಕೆಟ್ ಫೈನಲ್ ಮಾಡುತ್ತೇನೆ ಎಂದು ಡಿಕೆಶಿ ಅಬ್ಬರಿಸಿದ್ದರು. ಸಿದ್ದರಾಮಯ್ಯನವರಿಗೆ ಒಮ್ಮೆ ಅವಕಾಶ ನೀಡಿ, ಅವರ ನೇತೃತ್ವದಲ್ಲಿ ಚುನಾವಣೆ ಸೋತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದು ಮರೆತು ಹೋಯಿತೇ ಭಯ ಎನ್ನುವುದು ಮೋದಿ ಸರ್ಕಾರಕ್ಕೆ ಇರುತ್ತಿದ್ದರೆ, ಆರ್ಟಿಕಲ್ 370 ರದ್ದು, CAA ಕಾನೂನು, ರಾಮಮಂದಿರ ನಿರ್ಮಾಣ, ಟ್ರಿಪಲ್ ತಲಾಕ್ ರದ್ದು, ಸರ್ಜಿಕಲ್ ಸ್ಟ್ರೈಕ್ ಸಾಧ್ಯವಾಗುತ್ತಿರಲಿಲ್ಲ ಎಂದು ತಿರುಗೇಟು ನೀಡಿದೆ.
ಸಿದ್ದರಾಮಯ್ಯ ಅವರೇ, ಇವೆಲ್ಲವನ್ನೂ ವಿರೋಧಿಸಿದ ದೇಶದೊಳಗಿನ ದ್ರೋಹಿಗಳಿಂದ ನಮಗೆ ಭಯ ಕಾಡುತ್ತಿರುವುದು ನಿಜ. ಜನಸಂಕಲ್ಪ ಯಾತ್ರೆ ಆರಂಭದಲ್ಲೇ ಹೀಗಾದರೆ, ಮುಂದೆ ಹೇಗೆ ಸಿದ್ದರಾಮಯ್ಯ? ಎಂದು ಪ್ರಶ್ನಿಸಿದೆ.
ಬಿಜೆಪಿ ಸರ್ಕಾರ ಮಾಡಿದ ಮೀಸಲಾತಿ ಹೆಚ್ಚಳ ಕಾಂಗ್ರೆಸ್ ಗೆ ಬಿಸಿತುಪ್ಪವಾಗಿ ಪರಿಣಮಿಸಿದೆ
ದಶಕಗಳಿಂದ ವಿದೂಷಕನಾಗಿ ದೇಶದ ಜನರನ್ನು “ಅಪ್ರಬುದ್ಧ ಬಾಲಕ” ನಗಿಸುತ್ತಿದ್ದಾನೆ. ಸಿದ್ದರಾಮಯ್ಯನವರೇ, ಬಟಾಟೆಯಿಂದ ಚಿನ್ನ ತೆಗೆಯುವವ ವಿದೂಷಕನಲ್ಲದೆ ಮತ್ತೇನು? ಅಧಿಕಾರವಿದ್ದಾಗ ಪರಿಶಿಷ್ಟ ವರ್ಗದ ಬೇಡಿಕೆಯನ್ನು ಮನ್ನಿಸದೆ ಕಾಲಹರಣ ಮಾಡಿದ್ದ ಸಿದ್ದರಾಮಯ್ಯ ಅವರಿಗೆ ಈಗ ಬಸವರಾಜ ಬೊಮ್ಮಾಯಿ ಸರ್ಕಾರ ಮಾಡಿದ ಮೀಸಲಾತಿ ಹೆಚ್ಚಳ ಬಿಸಿತುಪ್ಪವಾಗಿ ಪರಿಣಮಿಸಿದೆ ಎಂದು ವಾಗ್ದಾಳಿ ನಡೆಸಿದೆ.
ಪರಿಶಿಷ್ಟ ವರ್ಗದವರ ಏಳಿಗೆ ಸಹಿಸದ ಕಾಂಗ್ರೆಸ್ ಮೀಸಲಾತಿ ಹೆಚ್ಚಳವನ್ನು ವಿರೋಧಿಸುತ್ತಿತ್ತು. ಏಕೆ ಈ ದಲಿತ ವಿರೋಧಿ ಮನೋಸ್ಥಿತಿ? ಬಿಜೆಪಿ ಸರ್ಕಾರ ಪರಿಶಿಷ್ಟ ವರ್ಗದ ಮೀಸಲಾತಿಯನ್ನು ಹೆಚ್ಚಳ ಮಾಡಿದ್ದೇ ತಡ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ನಾಯಕರಿಗೆ ಬೆವರಿಳಿಯತೊಡಗಿದೆ. ಸಿದ್ದರಾಮಯ್ಯ ಅವರೇ, ತಾವು ಓಟ್ ಬ್ಯಾಂಕ್ ಆಗಿ ಬಳಸಿದ್ದ ದಲಿತ ಸಮುದಾಯ ಬಿಜೆಪಿ ಪಕ್ಷದೊಂದಿಗೆ ಕೈ ಜೋಡಿಸುತ್ತಿರುವುದು ಸಹಿಸಿಕೊಳ್ಳಲಾಗುತ್ತಿಲ್ಲವೇ? ಎಂದು ಪ್ರಶ್ನೆ ಮಾಡಿದೆ.
#STATE BJP #SIDDARAMAIAH #B S YEDIYURAPP #FORMER CM #DK SHIVAKUMAR
More News
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು? ಹೊಚ್ಚಹೊಸ ಧಾರಾವಾಹಿ ‘ಕೃಷ್ಣ ರುಕ್ಕು’ ಇದೇ ಮಾರ್ಚ್ 9 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರನ್ನು ಬೇಟಿ ಮಾಡಿದ ಸಚಿವರ ನಿಯೋಗ
ಜಿಯೋ ಹಾಟ್ಸ್ಟಾರ್ನಲ್ಲಿ ವರ್ಲ್ಡ್ ಡಿಜಿಟಲ್ ಪ್ರೀಮಿಯರ್ “ಕ್ಷೇತ್ರಪತಿ”
ʻನಂದಗೋಕುಲʼ ಧಾರಾವಾಹಿಗೆ ಹಿರಿ ಸೊಸೆ ಪ್ರಿಯಾ ಎಂಟ್ರಿ: ನಂದಕುಮಾರ್ ಮನೆಯಲ್ಲಿ ಶುರುವಾಗಲಿದೆಯೇ ವಾರಗಿತ್ತಿಯರ ಮುನಿಸು?
ಕೆಡಿಪಿ ಸಭೆಯಲ್ಲಿ ಸಚಿವ ಸಂತೋಷ ಲಾಡ್ ಹಾಗು ಎಂಎಲ್ಸಿ ಜಕ್ಕಪ್ಪನವರ ನಡುವೆ ವಾಗ್ವಾದ