ಡೆಹ್ರಾಡೂನ್: ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ ಪ್ರವಾಸದಲ್ಲಿದ್ದು, ಶುಕ್ರವಾರ ಕೇದಾರನಾಥಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕೇದಾರನಾಥ ಬಳಿಕ ಬದರಿನಾಥಕ್ಕೆ ಭೇಟಿ ನೀಡುವ ಪ್ರಧಾನಿ ಮೋದಿಯವರು ಬಳಿಕ ಹೇಮಕುಂಡ್ ಸಾಹಿಬ್ ರೋಪ್ವೇ ಮತ್ತು ಕೆಲವೊಂದು ರಸ್ತೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಮೋದಿ ಭೇಟಿ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳನ್ನು ಹೂವಿನಿಂದ ಅಲಂಕರಿಸಲಾಗಿದೆ. ರಸ್ತೆ ವಿಸ್ತರಣೆ ಮತ್ತು ರೋಪ್ವೇ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಜನರನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ.

ಹೇಮಕುಂಡ್ ರೋಪ್ವೇ ಗೋವಿಂದಘಾಟ್ನಿಂದ ಹೇಮಕುಂಡ್ ಸಾಹಿಬ್ಗೆ ಸಂಪರ್ಕ ಕಲ್ಪಿಸುತ್ತದೆ. ಇದು ಸುಮಾರು 12.4 ಕಿಮೀ ಉದ್ದವಿರಲಿದ್ದು, ಪ್ರಯಾಣದ ಸಮಯವನ್ನು ಒಂದು ದಿನಕ್ಕಿಂತ ಹೆಚ್ಚು ಸಮಯದಿಂದ ಕೇವಲ 45 ನಿಮಿಷಗಳಿಗೆ ಕಡಿಮೆ ಮಾಡುತ್ತದೆ. ಈ ರೋಪ್ವೇ ಘಂಗಾರಿಯಾವನ್ನು ಸಹ ಸಂಪರ್ಕಿಸುತ್ತದೆ.

ಇದು ವ್ಯಾಲಿ ಆಫ್ ಫ್ಲವರ್ಸ್ ನ್ಯಾಷನಲ್ ಪಾರ್ಕ್ಗೆ ಗೇಟ್ವೇ ಆಗಿದೆ” ಎಂದು ತಿಳಿಸಿದೆ.




