Siddaramaiah Clarified : ಸಿಎಂ ನಾಯಿಮರಿ ಹೇಳಿಕೆ ವಿವಾದ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಜ.05; ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಯಿಮರಿಯಂತೆ ನಿಂತುಕೊಳ್ತಾರೆ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ವಿವಾದದ ಬಗ್ಗೆ ಗುರುವಾರ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿ ನಾನು ಸಿಎಂ ಬೊಮ್ಮಾಯಿಗೆ ಧೈರ್ಯ ಇರಬೇಕು ಎಂಬ ಅರ್ಥದಲ್ಲಿ ಆ ಮಾತನ್ನು ಹೇಳಿದ್ದೆ ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.


ಮುಖ್ಯಮಂತ್ರಿ ಅವರನ್ನು ನಾಯಿಮರಿ ಎಂದು ಹೇಳಿಲ್ಲ. ಧೈರ್ಯ ಇರಬೇಕು ಎಂಬ ಅರ್ಥದಲ್ಲಿ ಹೇಳಿದ್ದೆ. ಕೇಂದ್ರದಿಂದ ಅನುದಾನ ತರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. 5ನೇ ಹಣಕಾಸು ಆಯೋಗದ 5495 ಕೋಟಿ ರೂಪಾಯಿ ತೆಗೆದುಕೊಂಡಿಲ್ಲ. ಇದನ್ನು ಕೇಳಲು ಧೈರ್ಯ ಬೇಕು. ನಾಯಿಮರಿ ಹಾಗೇ ಇರಬಾರದು ಎಂದಿದ್ದೆ. ಆ ರೀತಿ ಹೇಳುವುದು ಅಸಾಂವಿಧಾನವೇ? ನನಗೆ ಟಗರು ಅಂತಾರೆ, ಹುಲಿಯಾ ಅಂತಾರೆ ಅದು ಅಸಾಂವಿಧಾನಕವೇ.

ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರನ್ನು ರಾಜಾಹುಲಿ ಎಂದು ಅವರ ಪಕ್ಷದವರೇ ಕರೆಯುತ್ತಾರೆ. ಅವರು ಹುಲಿಯಾ. ನಾಯಿ ಎಂದರೆ ನಂಬಿಕೆಯುಳ್ಳ ಪ್ರಾಣಿ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

More News