ಬೆಂಗಳೂರು:ಜ.09 : ವಿವಾದಾತ್ಮಕ ʻಸಿದ್ದು ನಿಜಕನಸುಗಳುʼ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಬೆಂಗಳೂರಿನ 60ನೇ ಸಿಸಿಹೆಚ್ ನ್ಯಾಯಾಲಯ ಸೋಮವಾರ ಮಧ್ಯಂತರವಾಗಿ ತಡೆ ನೀಡಿದೆ. ಕೆಪಿಸಿಸಿ ಮತ್ತು ಸಿದ್ದರಾಮಯ್ಯ ಈ ಪುಸ್ತಕ ಪ್ರಕಟಣೆ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

"ಸಿದ್ದು ನಿಜಕನಸುಗಳು" ಎಂಬ ಪುಸ್ತಕದ ಮೂಲಕ ಹಲವು ಸೂಕ್ಷ್ಮ ವಿಷಯಗಳನ್ನು ಬಹಿರಂಗಪಡಿಸುವ ಜತೆ ಹಲವು ಪ್ರಶ್ನೆಗಳಿಗೆ ಉತ್ತರ ಹುಡುಕಿ ಕೊಡುವ ಪ್ರಯತ್ನವನ್ನು ಶ್ಲಾಘಿಸುತ್ತೇನೆ.
— Dr. Ashwathnarayan C. N. (@drashwathcn) January 8, 2023
ಈ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ. ನೀವೂ ಬನ್ನಿ. pic.twitter.com/GRnvlmqGrp
ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ ಈ ಪುಸ್ತಕ ಇಂದು ಮಧ್ಯಾಹ್ನ ಲೋಕಾರ್ಪಣೆ ಆಗಬೇಕಾಗಿತ್ತು. ಕೋರ್ಟ್ ತೀರ್ಪಿನ ಕಾರಣ ಕಾರ್ಯಕ್ರಮ ರದ್ದುಗೊಳಿಸಲಾಗಿದೆ ಎಂದು ಆಯೋಜಕರು ತಿಳಿಸಿದು ಬಂದಿದೆ.




