J.P.Nadda : ಜೆ.ಪಿ ನಡ್ಡಾ ಮಗನ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ ಬಿಜೆಪಿ ನಾಯಕರು

ಬೆಂಗಳೂರು.ಫೆ.5: ಇಂದು ಸಂಜೆ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪುತ್ರನ ವಿವಾಹ ಆರತಕ್ಷತೆ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.

ವಿವಾಹ  ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು  ವಿಶೇಷ ವಿಮಾನದಲ್ಲಿ ಸಿಎಂ ಬೊಮ್ಮಾಯಿ‌, ಮಾಜಿ ಸಿಎಂ ಯಡಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ‌.ಟಿ. ರವಿ ದೆಹಲಿಗೆ ತೆರಳಲಿದ್ದಾರೆ. ಹೆಚ್ಎಎಲ್ ಏರ್ ಪೋರ್ಟ್ ನಿಂದ ವಿಶೇಷ ವಿಮಾನದಲ್ಲಿ  ತೆರಳಿದ ಬಿಜೆಪಿ ನಾಯಕರು.

More News