ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಇದು ನನ್ನ ಕೊನೆಯ ಅಧಿವೇಶನ, ಇನ್ಮುಂದೆ ಚುನಾವಣೆಗೂ ಸ್ಪರ್ಧಿಸಲ್ಲ ಎಂದು ಹೇಳಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುತ್ತದೆ. https://t.co/tdpgUXqRAz
— Narendra Modi (@narendramodi) February 24, 2023
ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಎರಡು ದಿನಗಳ ಹಿಂದೆ ಪಾಲ್ಗೊಂಡು ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇದು ನನ್ನ ಕೊನೆಯ ಅಧಿವೇಶನ ಹಾಗೂ ಭಾಷಣ ಎಂದು ಭಾವುಕರಾಗಿ ನುಡಿದಿದ್ದರು.

ಈ ಮಾತುಗಳನ್ನು ಕೇಳಿಸಿಕೊಂಡಿರುವ ಪ್ರಧಾನಿ ಅವರು ಕನ್ನಡದಲ್ಲೇ ಟ್ವೀಟ್ ಮಾಡಿ ಬಿಜೆಪಿ ಕಾರ್ಯಕರ್ತನಾದ ನನಗೆ ಈ ಭಾಷಣ ಸ್ಫೂರ್ತಿ, ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಗಿದೆ. ಈ ಭಾಷಣ ನಮ್ಮ ಕಾರ್ಯಕರ್ತರಿಗೆ ಖಂಡಿತವಾಗಿಯೂ ಸ್ಪೂರ್ತಿಯಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.




