ಬೆಂಗಳೂರು : ರಾಜ್ಯ ಸರ್ಕಾರವು ಕೇವಲ 24 ಗಂಟೆಗಳ ಅಂತರದಲ್ಲಿ 6000 ಕೋಟಿ ರೂ ಮೊತ್ತದ ಬರೋಬ್ಬರಿ 1,830 ಕಾಮಗಾರಿಗೆ ಟೆಂಡರ್ ಆಹ್ವಾನಿಸಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾ ಧ್ಯಕ್ಷ ಪೃಥ್ವಿ ರೆಡ್ಡಿ ಆರೋಪಿಸಿದ್ದು,ಸಂಬಂಧಪಟ್ಟ 462 ಪುಟಗಳ ದಾಖಲೆಗಳನ್ನು ಬಿಡುಗಡೆ ಮಾಡಿದರು.
ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಫೆಬ್ರವರಿ 24ರ ಮುಂಜಾನೆ 2.30, ಫೆ.25 ರ ಮುಂಜಾನೆ 2.30ರ ಒಳಗೆ 24 ಗಂಟೆಯಲ್ಲಿ ಬರೋಬ್ಬರಿ 6000 ಕೋಟಿ ರೂಪಾಯಿ ಮೊತ್ತದ 1830 ಅಲ್ಪಾವಧಿ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದೆ.ಒಟ್ಟು 15ರಿಂದ 20 ಸಾವಿರ ಕೋಟಿ ರೂಪಾಯಿ ಮೊತ್ತದ ವಿವಿಧ ಟೆಂಡರ್ಗಳನ್ನು ಕರೆಯಲಾಗಿದೆ ಎಂಬ ಮಾಹಿತಿಯಿದ್ದು,ಪ್ರಸ್ತುತ ನಮಗೆ 6,000 ಕೋಟಿ ರೂಪಾಯಿ ಮೊತ್ತದ ಟೆಂಡರ್ಗಳ ಮಾಹಿತಿ ಮಾತ್ರ ಸಿಕ್ಕಿದೆ.ಕೇವಲ 24 ಗಂಟೆಗಳಲ್ಲಿ ದಿಢೀರ್ ಅಲ್ಪಾವಧಿ ಟೆಂಡರ್ಗಳನ್ನು ಕರೆಯುವ ಅಗತ್ಯವೇನಿತ್ತು? ಕೆಲವೇ ದಿನಗಳಲ್ಲಿ ಚುನಾವಣೆ ನಡೆಯುವುದರಿಂದ ತರಾತುರಿಯಲ್ಲಿ ಟೆಂಡರ್ ಕರೆದಿರುವುದು ಅನುಮಾನ ಮೂಡಿಸಿದೆ ಎಂದು ಅವರು ಆರೋಪಿಸಿದರು.
ಅಮಿತ್ ಶಾರವರು ಕರ್ನಾಟಕ ಪ್ರವಾಸದ ವೇಳೆ ಬಿಜೆಪಿಯಿಂದ ಭ್ರಷ್ಟಾಚಾರರಹಿತ ಆಡಳಿತ ನೀಡುತ್ತೇವೆ ಎಂದು ಹೇಳಿದ್ದರು.40% ಕಮಿಷನ್ ಆಡಳಿತದ ಬದಲು 100% ಕಮಿಷನ್ ಆಡಳಿತ ಬರುತ್ತದೆ ಎಂದು ಹೇಳಿರಬಹುದು ಎಂದು ಲೇವಡಿ ಮಾಡಿದರು.ರಾಜ್ಯಾದ್ಯಂತ ಸೀರೆ,ಕುಕ್ಕರ್,ಚಿನ್ನ,ಬೆಳ್ಳಿ,ಟಿವಿ ಮುಂತಾದ ವುಗಳನ್ನು ಮತದಾರರಿಗೆ ಹಂಚುತ್ತಿರುವುದಕ್ಕೆ ಬಿಜೆಪಿಗೆ ಹಣ ಎಲ್ಲಿಂದ ಬರುತ್ತಿದೆ.ತುರ್ತು ಸಂದರ್ಭದಲ್ಲಿ ಮಾತ್ರ ಅಲ್ಪಾವಧಿ ಟೆಂಡರ್ಗಳನ್ನು ಕರೆಯಲಾಗುತ್ತದೆ.ಆದರೆ ಈಗ ಅಂತಹ ಯಾವುದೇ ಸನ್ನಿವೇಶ ಇಲ್ಲದಿದ್ದರೂ ಚುನಾವಣೆಗಾಗಿ ಜನರ ತೆರಿಗೆ ಹಣವನ್ನು ಲೂಟಿ ಮಾಡಲು ಟೆಂಡರ್ ಕರೆಯಲಾಗಿದೆ ಎಂದು ಅವರು ಆರೋಪಿಸಿದರು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನ ಸೇರಿದಂತೆ ರಾಜ್ಯ ವಿವಿಧೆಡೆ ಶಿಕ್ಷಕರು,ಪೌರ ಕಾರ್ಮಿಕರು,ಆರೋಗ್ಯ ಸಿಬ್ಬಂದಿ ಮುಂತಾದವರು ನ್ಯಾಯಯುತವಾಗಿ ಬರಬೇಕಾದ ವೇತನಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ಬಳಿ ಹಣವಿಲ್ಲವೆಂದು ಅವರಿಗೆಲ್ಲ ರಾಜ್ಯ ಬಿಜೆಪಿ ಸರ್ಕಾರ ಸಬೂಬು ಹೇಳುತ್ತಿದೆ.ಆದರೆ ಗುತ್ತಿಗೆ ಕಾಮಗಾರಿಗಳಿಗೆ ಟೆಂಡರ್ ಕರೆಯಲು ಮಾತ್ರ ಸರ್ಕಾರದ ಬಳಿ ಹಣ ಇದೆಯೇ? ಎಲ್ಲೆಲ್ಲಿ ಕಮಿಷನ್ ಹೊಡೆ ಯಲು ಅವಕಾಶವಿದೆಯೋ ಅಲ್ಲಿಗೆ ಮಾತ್ರ ಸರ್ಕಾರ ಖರ್ಚು ಮಾಡಲು ಮುಂದಾಗಿದೆ ಎಂದು ಅವರು ಶಂಕೆ ವ್ಯಕ್ತಪಡಿಸಿದರು.
ಬ್ರಿಜೇಶ್ ಕಾಳಪ್ಪ ಮಾತನಾಡಿ, “ಈ ಎಲ್ಲ ಟೆಂಡರ್ಗಳ ಸಲ್ಲಿಸಲು ಮಾರ್ಚ್ 15ರ ಕೊನೆಯ ದಿನವಾಗಿದೆ.ಬೀದರ್ ನಿಂದ ಚಾಮರಾಜನಗರದ ತನಕ,ರಾಜ್ಯ ಸರ್ಕಾರದ ಬಹುತೇಕ ಎಲ್ಲ ಇಲಾಖೆಗಳ ಟೆಂಡರ್ಗಳು ಇದರಲ್ಲಿವೆ. ಒಂದೇ ಬಾರಿ ಇಷ್ಟು ಟೆಂಡರ್ ಕರೆದಿರುವುದು ಜಗತ್ತಿನಲ್ಲೇ ಇದೇ ಮೊದಲಿರಬಹುದು. ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಟೆಂಡರ್ ಆಹ್ವಾನಿಸಿ ಅಕ್ರಮ ಎಸಗುವ ಸಾಧ್ಯತೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಗ್ರಾಮೀಣ ನೀರು ಸರಬರಾಜು ಇಲಾಖೆಯ ಒಂದು ಲಕ್ಷ ಮನೆಗಳಿಗೆ ನೀರು ಪೂರೈಸುವ 2000 ಕೋಟಿ ರೂ.ಮೊತ್ತದ 456 ಟೆಂಡರ್ಗಳನ್ನು ಕರೆಯಲಾಗಿದೆ.ಇಂಧನ ಇಲಾಖೆ ವಸತಿ ಕಟ್ಟಡಗಳ ಕಾಂಪೌಂಡ್ ನಿರ್ಮಾ ಣ ಮತ್ತಿತರ ಕಾಮಗಾರಿಗಳಿಗೆ ಕರೆದಿರುವ ಟೆಂಡರ್ಗಳಲ್ಲಿ 4 ಕೋಟಿ,5 ಕೋಟಿ ರೂ ಎಂಬ ರೌಂಡ್ ಫಿಗರ್ಗಳಿವೆ.ಕೆಪಿಟಿಸಿ ಎಲ್ನಲ್ಲಿ ಮಹೀಂದ್ರ ಬೊಲೆರೊ ವಾಹನಗಳಿಗೆ ಅಂದಾಜು ಮೊತ್ತವನ್ನೇ ನಮೂದಿಸದೇ ಮೂರು ಸಲ ಟೆಂಡರ್ ಕರೆದಿದ್ದಾರೆ.ಅರಣ್ಯ ಇಲಾಖೆಯ ಎಲ್ಲ ಟೆಂಡರ್ಗಳನ್ನು ಕೂಡ ಏಕಕಾಲಕ್ಕೆ ಕರೆಯಲಾಗಿದೆ.ಈ ಎಲ್ಲ ಟೆಂಡರ್ಗಳು ಕೇವಲ 7ರಿಂದ 15 ದಿನಗಳ ಅಲ್ಪಾವಧಿ ಟೆಂಡರ್ಗಳಾಗಿವೆ. ಅಮಿತ್ ಶಾಗೆ ತಾಕತ್ತಿದ್ದರೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ ಈ ಎಲ್ಲ ಟೆಂಡರ್ಗಳನ್ನು ರದ್ದುಪಡಿಸಲಿ” ಎಂದು ಬ್ರಿಜೇಶ್ ಕಾಳಪ್ಪ ಸವಾಲು ಹಾಕಿದರು.




