ರಾಜಭವನದಲ್ಲಿ ರಾಷ್ಟ್ರಪತಿಗಳ ಚಹಕೂಟ

ಬೆಂಗಳೂರು: ಇಂದು ಸಂಜೆ ರಾಜಭವನದಲ್ಲಿ ಆಯೋಜಿಸಲಾಗಿದ್ದ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀ ರಾಮನಾಥ್ ಕೋವಿಂದ್ ಮತ್ತು ಪ್ರಥಮ ಮಹಿಳೆ ಸವಿತಾ ಕೋವಿಂದ್, ಅವರೊಂದಿಗಿನ ಚಹಾಕೂಟದಲ್ಲಿ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಭಾಗಿಯಾಗಿದ್ದರು.

ಚಹಾಕೂಟದಲ್ಲಿ ಭಾಗವಹಿಸಿದ ನ್ಯಾಯಾಧೀಶರು ಮತ್ತು ಅವರ ಕುಟುಂಬದವರೊಂದಿಗೆ ರಾಷ್ಟ್ರಪತಿಗಳು ಹಾಗೂ ರಾಜ್ಯಪಾಲರು ಮಾತುಕತೆ ನಡೆಸಿ, ಕುಶಲೋಪಚಾರ ವಿಚಾರಿಸಿದರು.

ಈ ಸಂದರ್ಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಸೇರಿದಂತೆ ಇತರೆ ನ್ಯಾಯಾಧೀಶರುಗಳು ಅವರ ಕುಟುಂಬಸ್ಥರೊಂದಿಗೆ ಭಾಗವಹಿಸಿದ್ದರು.

More News