ಬೆಂಗಳೂರು : ದೈವಜ್ಞ ಬ್ರಾಹ್ಮಣ ಸಮಾಜ ಹಾಗೂ ಇತರ ಸಮುದಾಯದವರು ತಮ್ಮ ಪಾರಂಪರಿಕ ಕಸುಬನ್ನು ಉಳಿಸಿ ಬೆಳೆಸಲು ಸರ್ಕಾರ ಎಲ್ಲ ರೀತಿಯ ನೆರವು ನೀಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಸಂಘದ ಸಮುದಾಯ ಭವನ ನಿರ್ಮಾಣಕ್ಕೆ ವರ್ಚುವಲ್ ಕಾರ್ಯಕ್ರಮದಲಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಬದಲಾಗುತ್ತಿರುವ ಆರ್ಥಿಕ ವ್ಯವಸ್ಥೆಯಲ್ಲಿ ಕುಲಕಸುಬುಗಳ ನ್ನು ಉಳಿಸಿ,ಬೆಳೆಸಿಕೊಳ್ಳುವ ವಿವಿಧ ಸಮುದಾಯಗಳ ಪ್ರಯತ್ನ ಅತ್ಯಂತ ಅಭಿಮಾನ ಪಡುವ ವಿಷಯ.
ಅತ್ಯಂತ ಕೌಶಲ್ಯಪೂರ್ಣ ಕಾಯಕವನ್ನು ಮಾಡುತ್ತಿದ್ದೀರಿ.ವೈಯಕ್ತಿಕ ವಿಶ್ವಾಸ ಮತ್ತು ಸಂಬಂಧ ಗ್ರಾಹಕ ರ ಜೊತೆಗಿರುತ್ತದೆ.ನಿಮ್ಮ ವೃತ್ತಿಯ ಮಹತ್ವವನ್ನು ಇದು ಸೂಚಿಸುತ್ತದೆ.ಬದಲಾಗುತ್ತಿರುವ ಆರ್ಥಿಕ ವ್ಯವ ಸ್ಥೆಯಲ್ಲಿ-ವ್ಯಾಪಾರೀಕರಣ,ಜಾಗತೀಕರಣ ಹಾಗೂ ತಂತ್ರಜ್ಞಾನ ಹಾಗೂ ಸ್ಪರ್ಧೆಯಿಂದಾಗಿ ಹಲವರು ಕಸುಬು ಬಿಡುವ ಪರಿಸ್ಥಿತಿ ಬಂದಿದೆ.ಬದಲಾಗುತ್ತಿರುವ ಪರಿಸ್ಥಿತಿಗೆ ನಾವು ಹೊಂದಿಕೊಂಡಾಗ ಮಾತ್ರ ಕಸುಬನ್ನು ಮುಂದುವರೆಸಲು ಸಾಧ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಸಂಘದ ಅಧ್ಯಕ್ಷ ರಾಮರಾವ್ ವಿ. ರಾಯ್ಕರ್ ಮತ್ತು ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.