ಬೆಂಗಳೂರು : ಕರ್ನಾಟಕ ವೈದ್ಯಕೀಯ ಕಡ್ಡಾಯ ಸೇವೆ ಕಾಯ್ದೆಯಡಿ ವೈದ್ಯಕೀಯ ಕೋರ್ಸ್ ಮುಗಿಸಿದವರಿಗೆ ಕಡ್ಡಾಯ ಗ್ರಾಮೀಣ ಸೇವೆ ಮಾಡುವುದರಿಂದ ವಿನಾಯಿತಿ ನೀಡಿ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಈ ಸಂಬಂಧ ಕರ್ನಾಟಕ ವೈದ್ಯಕೀಯ ಕಡ್ಡಾಯ ಸೇವೆ ವಿಧೇಯಕಕ್ಕೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ.ಅದರಂತೆ ವೈದ್ಯಕೀಯ ಕೋರ್ಸ್ ಮುಗಿಸಿದ ಅಭ್ಯರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆ ಮಾಡುವುದರಿಂದ ವಿನಾಯಿತಿ ನೀಡಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.
ವೈದ್ಯಕೀಯ ಕೋರ್ಸ್ ಮುಗಿಸಿದವರಿಗೆ ಕಡ್ಡಾಯ ಗ್ರಾಮೀಣ ಸೇವೆಯ ನ್ನು ಗ್ರಾಮೀಣ ಭಾಗದಲ್ಲಿ ಇರುವ ಖಾಲಿ ಹುದ್ದೆಗಳಿಗೆ ಸೀಮಿತಗೊಳಿಸಲು ನಿರ್ಧರಿಸ ಲಾಗಿದೆ.ಅಗತ್ಯ ಬಿದ್ದರೆ ಕಡ್ಡಾಯ ಸೇವೆ ಮೂಲಕ ವೈದ್ಯರ ನಿಯೋಜಿಸುವ ಅಧಿಕಾರ ಸರ್ಕಾರಕ್ಕಿರಲಿದೆ ಎಂದು ತಿಳಿಸಿದರು.
ಎಂಬಿಬಿಎಸ್,ಸ್ನಾತಕೋತ್ತರ ಮತ್ತು ಸೂಪರ್ ಸ್ಪೆಷಾಲಿಟಿ ಪದವೀಧರರು ಕರ್ನಾಟಕ ಕಡ್ಡಾಯ ಸೇವೆ ಕಾಯ್ದೆ ಅನ್ವಯ ಗ್ರಾಮೀಣ ಪ್ರದೇಶದಲ್ಲಿರುವ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಒಂದು ವರ್ಷ ಕಡ್ಡಾಯವಾಗಿ ಸೇವೆ ಸಲ್ಲಿಸಬೇಕು. ಎಂಬಿಬಿಎಸ್ ಪದವೀಧರರು ಮತ್ತು ಸ್ನಾತಕೋತ್ತರ ಪದವೀಧರರನ್ನು ಗ್ರಾಮೀಣ ಸೇವೆಗೆ ಲಭ್ಯವಿರುವ ಖಾಲಿ ಹುದ್ದೆಗಳಿಗೆ ಪರಿಗಣಿಸುವ ಪ್ರಸ್ತಾವನೆಯಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆಗೆ 3,000ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿ ಗಳು ನೋಂದಾಯಿಸಿಕೊಂಡಿ ದ್ದಾರೆ.ಆದರೆ,ಖಾಲಿ ಹುದ್ದೆಗಳ ಸಂಖ್ಯೆ 1,900 ಇದು.ವೆಚ್ಚ ಕಡಿತಗೊಳಿಸುವ ಉದ್ದೇಶದಿಂದ ಗ್ರಾಮೀಣ ಸೇವಾ ಅಭ್ಯರ್ಥಿಗಳ ಸಂಖ್ಯೆಯನ್ನು ಖಾಲಿ ಹುದ್ದೆಗ ಳಿಗೆ ಸೀಮಿತಗೊಳಿಸಲು ಸರ್ಕಾರ ಮುಂದಾಗಿದೆ.
5,326.87 ಕೋಟಿ ರೂ. ಬರ ಪರಿಹಾರಕ್ಕೆ ಒಪ್ಪಿಗೆ:

ನೈರುತ್ಯ ಮುಂಗಾರಿನಲ್ಲಿ ಈ ಮುಂಚೆ 195 ಬರ ಪೀಡಿತ ಎಂದು ಘೋಷಿಸಲಾಗಿತ್ತು. ಇದರ ಜೊತೆಗೆ ಇದೀಗ 21 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದ್ದು, ಅದಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಬರದಿಂದ ಬೆಳೆ ನಷ್ಟ ಹಾಗೂ ತೋಟಗಾರಿಕೆ ಬೆಳೆ ನಷ್ಟವಾಗಿ 4,414 ಕೋಟಿ ರೂ. ಪರಿಹಾರ, 355 ಕೋಟಿ ರೂ. ಮೊತ್ತದ ಪಶು ಹಾನಿ, ಕುಡಿಯುವ ನೀರು 554 ಕೋಟಿ ರೂ. ಸೇರಿದಂತೆ ಎನ್ ಡಿಆರ್ ಎಫ್ ನಡಿ ಒಟ್ಟು 5,326.87 ಕೋಟಿ ರೂ. ಒಟ್ಟು ಪರಿಷ್ಕೃತ ಬರ ಪರಿಹಾರಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇದರ ಜೊತೆಗೆ ಬರ ಪರಿಹಾರ ಸಂಬಂಧ ಕೇಂದ್ರ ಸಚಿವರು ಭೇಟಿಗೆ ಅವಾಕಶ ನೀಡದಿರುವ ಬಗ್ಗೆ ಸಂಪುಟದಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.
ಬೆಳಗಾವಿ ಅಧಿವೇಶನ ಬಗ್ಗೆ ಚರ್ಚೆ:
ಡಿ.4 ರಿಂದ ಡಿ.15 ವರೆಗೆ ಬೆಳಗಾವಿ ಅಧಿವೇಶನ ನಡೆಸಲು ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗಿದೆ. ಈ ಸಂಬಂಧ ಅಂತಿಮ ತೀರ್ಮಾನ ಕೈಗೊಳ್ಳುವ ಅಧಿಕಾರ ಸಿಎಂಗೆ ವಹಿಸಲಾಗಿದೆ ಎಂದು ತಿಳಿಸಿದರು. 10 ದಿನಗಳ ಚಳಿಗಾಲದ ಅಧಿವೇಶನವನ್ನು ಬೆಳಗಾವಿ ನಡೆಸಲು ಸಚಿವ ಸಂಪುಟ ಸಭೆ ಚರ್ಚೆ ನಡೆಸಿದೆ. ಬರದ ಹಿನ್ನೆಲೆ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಬಗ್ಗೆ ಅನುಮಾನ ಉಂಟಾಗಿತ್ತು. ಆದರೆ ಇದೀಗ ಬೆಳಗಾವಿಯಲ್ಲೇ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ.
ಸಂಪುಟದ ಇತರ ಪ್ರಮುಖ ತೀರ್ಮಾನಗಳು




