CONGRESS IS NOT DOING OPERATION HASTA: ಪ್ರಧಾನಿ ಮೋದಿಯವರು ನಿರಾಶಾರಾಗಿ ಈ ರೀತಿ ಮಾತನಾಡುತ್ತಿದ್ದಾರೆ: ಬಿಜೆಪಿ ದಿವಾಳಿಯಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜಕೀಯ ಭಾಷಣ ಮಾಡಿದ್ದಾರೆ, ಬೇಕಾದರೆ ದಾಖಲಾತಿಗಳನ್ನ ಇಟ್ಟುಕೊಂಡು ಅವರು ಮಾತನಾಡಲಿ ಎಂದು ಸಿಎಂ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು.

ಬೆಂಗಳೂರಿನಲ್ಲಿ ಇಂದು ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಸುಳ್ಳು ಹೇಳಬಾರದು, ನಮ್ಮ ದೇಶ ಆರ್ಥಿಕವಾಗಿ ದಿವಾಳಿಯಾಗಿದೆ, ಅವರಿಂದ ಬರಗಾಲದ ಹಣ ಇನ್ನೂ ಕೊಡೋಕೆ ಆಗಿಲ್ಲ, ಪ್ರಧಾನ ಮಂತ್ರಿಗಳಿಗೆ ಇದು ಶೋಭೆ ತರಲ್ಲ ಎಂದು ಹೇಳಿದರು.
5 ಗ್ಯಾರಂಟಿ ಕೊಡೋಕೆ ಆಗಲ್ಲ ಅಂದಿದ್ದರು, ಈಗ ನಾವು ಮಾಡಿಲ್ವಾ, ಇದರಿಂದ ರಾಜ್ಯ ದಿವಾಳಿಯಾಗಿದೆ ಎನ್ನುವುದು ಸುಳ್ಳು, ಅವರು ಊಹಾಪೋಹಗಳ ಹೇಳಿಕೆ ಕೊಟ್ಟಿದ್ದಾರೆ, ಮೋದಿಯವರು ಪಾಪ ನಿರಾಶೆರಾಗಿದ್ದಾರೆ, ಮೋದಿಯವರು ರಾಜ್ಯಕ್ಕೆ 48 ಬಾರಿ ಬಂದ್ರಲ್ಲಾ ಅವರು ಹೋದ ಕಡೆಯಲ್ಲಾ ಸೋತರು, ಎಲ್ಲೆಲ್ಲಿ ರೊಡ್ ಶೋ ಮಾಡಿದರು ಎಲ್ಲೆಲ್ಲಿ ಸಾರ್ವಜನಿಕ ಸಭೆ ಮಾಡಿದ್ರು, ಎಲ್ಲಾ ಕಡೆ ಸೋತು ಬಿಟ್ಟಿದ್ದಾರೆ ಎಂದರು.
ಇಲ್ಲಿಯವರೆಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಲ್ಗಿಲ್ಲಾ ಎನ್ನುವುದನ್ನು ನೋಡಿದರೆ ಅಷ್ಟರಮಟ್ಟಿಗೆ ಬಿಜೆಪಿ ದಿವಾಳಿಯಾಗಿದೆ ಎಂದು ಆರೋಪ ಮಾಡಿದರು. ಡಿಸಿಎಂ ಸಿಎಂ ಲೂಟಿ ಮಾಡ್ತಿದ್ದಾರೆ ಎಂದು ಮೋದಿ ಹೇಳಿಕೆ ವಿಚಾರವಾಗಿ ತಿರುಗೇಟು ನೀಡಿದ ಅವರು, 40% ಲೂಟಿ ಮಾಡುತ್ತಿದ್ದಾರೆ ಅಂತ ಹೇಳಿದ್ದು ಯಾರು.? ಆಗ ಯಾವ ಸರ್ಕಾರ ಇತ್ತು, ಆಗ ನರೇಂದ್ರ ಮೋದಿ ಪಕ್ಷ ತಾನೆ ಇದ್ದಿದ್ದು, ಆದ್ದರಿಂದಲೇ ತನಿಖೆ ಮಾಡುತ್ತಿದ್ದೇವೆ ಎಂದರು.

ಒಂದು ದೇಶದ ಪ್ರಧಾನಿಯಾಗಿದ್ದುಕೊಂಡು ಸುಳ್ಳುಗಳನ್ನು ಹೇಳಬಾರದು, ಲಘವಾಗಿ ಮಾತನಾಡಬಾರದು ಎಂದು ತಿರುಗೇಟು ನೀಡಿದ ಅವರು, ಅವರಿಗೆ ದಾಖಲಾತಿ ಏನಾದ್ರು ಇದ್ದರೆ, ಅದನ್ನು ಐಬಿ, ರಾ, ಸಿಬಿಐಗೆ ನೀಡಲಿ ಎಂದು ಸವಾಲು ಹಾಕಿದರು.
ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿರುವ ಪ್ರಧಾನಿ, ಇನ್ನೂ ಕೂಡ ಅವರಿಗೆ ಬರಗಾಲದ ಪರಿಹಾರ ಕೊಡೋಕೆ ಆಗಿಲ್ಲಾ ಎಂದು ಕಿಡಿಕಾರಿದರು.
ಕಾಂಗ್ರೆಸ್ ಪಕ್ಷ ಆಪರೇಷನ್ ಹಸ್ತ ಮಾಡಲ್ಲ
ಕಾಂಗ್ರೆಸ್ ಪಕ್ಷ ಯಾವಾಗಲೂ ಅಪರೇಷನ್ ಹಸ್ತ ಮಾಡಲ್ಲ ಎಂದು ಸ್ಪಷ್ಟಪಡಿಸಿದ ಅವರು, ಪಕ್ಷದ ಸಿದ್ದಾಂತ ಒಪ್ಪಿ ಪಕ್ಷಕ್ಕೆ ಬಂದರೆ ನಾವು ಅವರನ್ನು ಸೇರಿಸಿಕೊಳ್ಳುತ್ತೇವೆ ಎಂದರು. MLA ಗಳು ಬರ್ತಾರೆ, ಮಾಜಿ MLA ಗಳು ಬರ್ತಾರೆ ಹಾಗೆಯೇ ಮುಖಂಡರು ಬರ್ತಾರೆ ಎಂದು ಸಿಎಂ ತಿಳಿಸಿದರು.
ಕಾಂಗ್ರೆಸ್ನವರು ನಮ್ಮ ಶಾಸಕರನ್ನ ಸೆಳೆಯಲು ಯತ್ನಿಸುತ್ತಿದ್ದಾರೆ ಎಂಬ ಕುಮಾರಸ್ವಾಮಿ ಅವರ ಆರೋಪಕ್ಕೆ ತಿರುಗೇಟು ನೀಡಿದ ಅವರು, ನಾವು ಯಾರನ್ನ ಆಪರೇಷನ್ ಮಾಡಲ್ಲ ಎಂದರು.

More News