ನವದೆಹಲಿ : ನಮ್ಮ ಪಕ್ಷದ ಏಳು ಶಾಸಕರಿಗೆ ತಲಾ 25 ಕೋಟಿ ರೂಪಾಯಿ ಅಮಿಷವೊಡ್ಡಿ, ನಮ್ಮ ಸರ್ಕಾರವನ್ನು ಉರುಳಿಸಲು ಬಿಜೆಪಿ ಸಂಚು ರೂಪಿಸಿದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ.
पिछले दिनों इन्होंने हमारे दिल्ली के 7 MLAs को संपर्क कर कहा है – “कुछ दिन बाद केजरीवाल को गिरफ़्तार कर लेंगे। उसके बाद MLAs को तोड़ेंगे। 21 MLAs से बात हो गयी है। औरों से भी बात कर रहे हैं। उसके बाद दिल्ली में आम आदमी पार्टी की सरकार गिरा देंगे। आप भी आ जाओ। 25 करोड़ रुपये देंगे…
— Arvind Kejriwal (@ArvindKejriwal) January 27, 2024
ತಮ್ಮ ಪಕ್ಷದ ಶಾಸಕರನ್ನು ಸಂಪರ್ಕಿಸಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಚ್ ಮಾಡಿರುವ ಕೇಜ್ರಿವಾಲ್, ಹಣದ ಆಮಿಷವೊಡ್ಡಿ ಶಾಸಕರ ಖರೀದಿಗೆ ಬಿಜೆಪಿ ಮುಂದಾಗಿದೆ ಎಂದು ಆರೋಪಿಸಿದ್ದಾರೆ.
ನಮ್ಮ ಶಾಸಕರಿಗೆ ಕರೆ ಮಾಡಿರುವ ವ್ಯಕ್ತಿಯೊಬ್ಬರು ತಮ್ಮೊಂದಿಗೆ 21 ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೊಂಡಿದ್ದಾರೆ, ದೆಹಲಿ ಸರ್ಕಾರ ಪತನಗೊಂಡ ನಂತರ ಚುನಾವಣೆಯಲ್ಲಿ ಸ್ಪರ್ಧಿಸಲು ಶಾಸಕರಿಗೆ ತಲಾ 25 ಕೋಟಿ ಹಣ ಮತ್ತು ಬಿಜೆಪಿಯಿಂದಲೇ ಟಿಕೆಟ್ ನೀಡಲಾಗುವುದು ಎಂಬ ಭರವಸೆ ನೀಡಿದ್ದಾರೆ ಎಂದು ಕೇಜ್ರಿವಾಲ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಆರೋಪಿಸಿದ್ದಾರೆ.
ನಮ್ಮ ಶಾಸಕರು ಇಂತಹ ಆಮಿಷಗಳಿಗೆ ಬಲಿಯಾಗುವುದಿಲ್ಲ, ಹಾಗೆಯೇ ಪಕ್ಷ ತ್ಯೆಜಿಸುವುದಿಲ್ಲ ಎಂದು ಹೇಳಿದ ಅವರು, ನಮ್ಮ ಸರ್ಕಾರವನ್ನು ಉರುಳಿಸುವ ಉದ್ದೇಶದಿಂದಲೇ ಅಬಕಾರಿ ಹಗರಣದಲ್ಲಿ ಎಎಪಿ ನಾಯಕರನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯವರು ಕಳೆದ 9 ವರ್ಷದಲ್ಲಿ ಹಲವಾರು ಬಾರಿ ನಮ್ಮ ಸರ್ಕಾರವನ್ನು ಊರುಳಿಸಲು ಹಲವು ರೀತಿಯ ಪಿತೂರಿಗಳನ್ನು ಮಾಡಿದ್ದರು, ಎಲ್ಲಾವೂ ವಿಫಲಾವಾಗಿವೆ ಎಂದು ಹೇಳಿದ್ದಾರೆ.




