BJP MLA M CHANDRAPPA: ಬಿಎಸ್ ವೈ ಯಿಂದಲೇ ನನ್ನ ಮಗನಿಗೆ ಟಿಕೆಟ್ ತಪ್ಪಿದೆ: ಕಿಚನ್ ಕ್ಯಾಬಿನೆಟ್ ನಲ್ಲಿ ದ್ದಕ್ಕೆ ಸೂಕ್ತ ಬಹುಮಾನ ಕೊಟ್ಟಿದ್ದಾರೆ: ಬಿಜೆಪಿ ಶಾಸಕ ಚಂದ್ರಪ್ಪ ಗಂಭೀರ ಆರೋಪ

ಚಿತ್ರದುರ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಂದ ನನ್ನ ಮಗನಿಗೆ ಟಿಕೇಟ್ ಕೈತುಪ್ಪಿದೆ ಎಂದು ಹೊಳಲ್ಕೆರೆ ಬಿಜೆಪಿ ಶಾಸಕ ಎಂ ಚಂದ್ರಪ್ಪ ನೇರ ಆರೋಪ ಮಾಡಿದ್ದಾರೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ಬಾಗಲಕೋಟೆ ಜಿಲ್ಲೆಯ ಯಡಿಯೂರಪ್ಪ ಮತ್ತೊರ್ವ ಅನುಯಾಯಿ ಗೋವಿಂದ್ ಕಾರಜೋಳ ಅವರಿಗೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಪುತ್ರ ರಘುನಂದನ್ ಗೆ ಟೆಕೆಟ್ ನೀಡಿದ್ದರೆ ಆತ ಬಾರೀ ಅಂತರದಿಂದ ಗೆಲ್ಲುತ್ತಿದ್ದ ಎಂದು ಚಂದ್ರಪ್ಪ ತಿಳಿಸಿದ್ದಾರೆ.
ಈ ಹೇಳಿಕೆ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ದ ಅವರ ಆಪ್ತರಲ್ಲಿ ಒಬ್ಬರಾಗಿದ್ದ ಎಂ ಚಂದ್ರಪ್ಪ ಸಮರ ಸಾರಿದ್ದಾರೆ ಎಂಬ ಮಾತುಗಳು ಇದೀಗ ಬಿಜೆಪಿ ವಲಯದಲ್ಲಿ ಕೇಳಿಬಂದಿವೆ.
ನನ್ನ ಪುುತ್ರನಿಗೆ ಬೇರೆ ಯಾರು ಟಿಕೆಟ್ ತಪ್ಪಿಸಲು ಸಾಧ್ಯವಿಲ್ಲ, ಯಡಿಯೂರಪ್ಪ ಅವರಿಂದಲೇ ನನ್ನ ಮಗನಿಗೆ ಟಿಕೆಟ್ ಕೈತಪ್ಪಿದ್ದು ಎಂದು ಶಾಸಕ ಚಂದ್ರಪ್ಪ ತೀವ್ರ ಬೇಸರ ವ್ಯಕ್ತಪಡಿಸಿದರು.

ನಿನ್ನೆ ಮಧ್ಯಾಹ್ನದವರೆಗೂ ನನ್ನ ಮಗನ ಹೆಸರು ಫೈನಲ್ ಆಗಿತ್ತು. ಆದರೆ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಿಲ್ಲ ಅಂದ್ರೆ ಕ್ಯಾಂಪೇನ್ ಮಾಡಲ್ಲ ಎಂದು ಯಡಿಯೂರಪ್ಪ, ಹೈಕಮಾಂಡ್ ಗೆ ಹೇಳಿದ್ದಕ್ಕೆ ನನ್ನ ಮಗನಿಗೆ ಟಿಕೆಟ್ ಮಿಸ್ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನನ್ನ ಮಗನಿಗೆ 2019 ರಲ್ಲಿ ಟಿಕೇಟ್ ಕೇಳಿದ್ದೆ, ಆಗ ಮುಂದಿನ ಬಾರಿ ನೀಡೋಣ ಎಂದು ಹೇಳಿದ್ದರು. ನಾರಾಯಣ ಸ್ವಾಮಿ ಪರ ಕಳೆದ ಬಾರಿ ಕೆಲಸ ಮಾಡಿ ಅವರನ್ನು 40 ಸಾವಿರ ಲೀಡ್ ನಲ್ಲಿ ಗೆಲ್ಲಿಸಿದ್ದೆ,
2024 ರ ಎಲೆಕ್ಷನ್ ನಲ್ಲಿ ಟಿಕೆಟ್ ಕೊಡ್ತೇವೆ ಎಂದು ಸಂತೋಷ್ ಜೀ ಕೂಡಾ ಹೇಳಿದ್ದರು. ಇದೇ ಗೋವಿಂದ ಕಾರಜೋಳ ನನ್ನ ಮಗನನ್ನು ಓಡಾಡಲು ಹೇಳಿದ್ದರು. ಪಾರ್ಟಿ ಸಭೆಯಲ್ಲಿ ಕೂಡಾ ಹೊರಗಿನ ಅಭ್ಯರ್ಥಿಗೆ ಟಿಕೆಟ್ ಕೊಟ್ಟಿದ್ದಾಗಿ ದ್ವನಿ ಎತ್ತಿದ್ದೆ. ಸರ್ವೆ ಬಂದವರಿಗೆ ನಮ್ಮ ಜಿಲ್ಲೆಯವರಿಗೆ ಟಿಕೆಟ್ ನೀಡಿ ಎಂದಿದ್ದೆ. ಮೋದಿ, ಅಮೀತ್ ಶಾ ಸರ್ವೆಯಲ್ಲಿ ರಘುಚಂದನ್ ಹೆಸರಿತ್ತು. ಸಿಇಸಿ ಕಮಿಟಿಯಲ್ಲಿ ನನ್ನ ಮಗನ ಹೆಸರು ಪೈನಲ್ ಆಗಿತ್ತು ಎಂದು ಚಂದ್ರಪ್ಪ ವಿವರಿಸಿದರು.

ನಿನ್ನೆ ಸಂಜೆ ಯಡಿಯೂರಪ್ಪ ಅವರಿಂದ ನನ್ನ ಮಗನಿಗೆ ಟಿಕೆಟ್ ತಪ್ಪಿದೆ. ಯಡಿಯೂರಪ್ಪ KJP ಪಕ್ಷ ಕಟ್ಟಿದ್ದಾಗ ಅವರ ಸಮಾಜದವರು ಯಾರು ಅವರೊಂದಿಗೆ ಬಂದಿರಲಿಲ್ಲ, ನಾನು 6 ತಿಂಗಳ ಮುಂಚೆಯೇ ರಾಜೀನಾಮೆ ಕೊಟ್ಟಿದ್ದೆ. ಅವರ ಮಗ ರಾಘವೇಂದ್ರ MP ಆಗಿ ಬಿಜೆಪಿಯಲ್ಲೇ ಇದ್ದರು. ನಾನು ಮಾತ್ರ ಅವರೊಂದಿಗೆ ಹೋಗಿದ್ದೆ. ಪುತ್ರರು ಯಾರು ಬಂದಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
2008 ರಲ್ಲಿ 110 ಸ್ಥಾನ ಗೆದ್ದಾಗ ನಮ್ಮ ಸಮಾಜದವರು ತ್ಯಾಗ ಮಾಡಿದ್ದರು. ಶಿವರಾಜ್ ತಂಗಡಗಿ, ವೆಂಕಟರಮಣಪ್ಪ, ಗೂಳಿಹಟ್ಟಿ ಬೆಂಬಲಿಸಿದ್ದರು. ಮೂರು ಮಂದಿ ವಡ್ಡರಿಂದ ಯಡಿಯೂರಪ್ಪ ಸಿಎಂ ಆಗಿದ್ದರು. ಅಂಥ ಮೂರು ಮಂದಿಯನ್ನ ಸಂಪುಟದಿಂದ ತೆಗೆದು ಅನ್ಯಾಯ ಮಾಡಿದ್ದರು ಎಂದು ಟಿಕೀಸಿದರು.

ಆದರೂ ಕೂಡಾ ನಾನು ಇವರನ್ನ ಎಂದೂ ಕೈಬಿಟ್ಟು ಹೋಗಿರಲಿಲ್ಲ. ನಮಗೆ ಯಡಿಯೂರಪ್ಪ ಈ ಬಹುಮಾನ ಕೊಟ್ಟಿದ್ದಾರೆ. 550 ಕಿಲೋಮೀಟರ್ ದೂರದ ವ್ಯಕ್ತಿಗೆ ಟಿಕೆಟ್ ಕೊಡುವಂತದ್ದು ಏನಿತ್ತು. ನಮಗೆ ತುಂಬಾನೇ ಅನ್ಯಾಯ ಮಾಡಿದ್ದಾರೆ. ಕಾರ್ಯಕರ್ತರ ಅಭಿಪ್ರಾಯ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಿಜಯೇಂದ್ರ ಯುವಕ ಎಂದು ಅಧ್ಯಕ್ಷ ಮಾಡಿದ್ದಾರೆ, ನನ್ನ ಮಗನೂ ಯುವಕ ಅವನಿಗೆ ಟಿಕೆಟ್ ಕೊಡ್ಲಿಲ್ಲ. ನಮ್ಮ ಸಮಾಜದ ಎಲ್ಲರೂ ಕೈ ಬಿಟ್ಟು ಹೋಗಿದ್ದಾರೆ, ನಾನು ಮಾತ್ರ ಆಧಾರವಾಗಿದ್ದೆ. ಈಗ ನಮ್ಮ ಸಮಾಜ ಮುಂದಿನ ಹೆಜ್ಜೆ ಇಡುತ್ತದೆ. ಬೊಮ್ಮಾಯಿ ಸಂಪುಟದಲ್ಲಿ ನನಗೆ ಅನ್ಯಾಯ ಮಾಡಿದ್ದರು. ಹಗಲು ರಾತ್ರಿ ಯಡಿಯೂರಪ್ಪ ಮನೆಗೆ ನಾನು ದುಡಿದೆ, ನಾನು ಏನೂ ಅನ್ಯಾಯ ಮಾಡಿದ್ದೆ ಎಂದು ಪ್ರಶ್ನಿಸಿದರ, ಪರೋಕ್ಷವಾಗಿ ಟಿಕೆಟ್ ಮಾರಾಟವಾಗಿದೆ ಎಂದು ಶಾಸಕ ಎಂ.ಚಂದ್ರಪ್ಪ ಗಂಭೀರ ಆರೋಪ ಮಾಡಿದರು.

ಯಡಿಯೂರಪ್ಪ ಕಿಚನ್ ಕ್ಯಾಬಿನೆಟ್ ನಲ್ಲಿ ಇದಿದ್ದಕ್ಕೆ ಈ ಬಹುಮಾನ ಕೊಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಶಾಸಕ, KJP ನಿಂತಾಗ ನಯಾ ಪೈಸೆ ಪಾರ್ಟಿ ಫಂಡ್ ಕೊಡ್ಲಿಲ್ಲ. ನಮ್ಮ ದುರ್ಗದಲ್ಲಿ ಮಹಾನ್ ನಾಯಕ ಇದ್ದಾನೆ, ಈಗಾಗಲೇ ಶಾಸ್ತಿ ಆಗಿದೆ, ಆತನಿಗೆ ಮುಂದೆಯೂ ಶಾಸ್ತಿ ಆಗುತ್ತದೆ, ನಮ್ಮ ಪಕ್ಷದಲ್ಲಿ ಸೋತವರನ್ನ ಕರೆತಂದು MLC ಮಾಡಿದ್ವಿ, ಅಷ್ಟು ನಿಯತ್ತಿಂದ ಮಾಡಿದ್ದೇವೆ, ನಾನು ನಂಬಿಸಿ ಮೋಸ ಮಾಡಲ್ಲ, ಆ ಮಹಾನ್ ನಾಯಕನನ್ನ ಅರ್ಥ ಮಾಡಿಕೊಂಡು ಹೇಳುತ್ತೇನೆ. ಮದಕರಿ ಕೋಟೆಗೆ ನುಗ್ಗಲು ಸಂಧಿ ತೋರಿಸಲು ಇರ್ಬೇಕು, ಅಂಥವರು ಇದ್ದಾರೆ ಎಂದು ಪರೋಕ್ಷವಾಗಿ ಮಾಜಿ ಶಾಸಕ ತಿಪ್ಪಾರೆಡ್ಡಿ ವಿರುದ್ದ ಚಂದ್ರಪ್ಪ ಗುಡುಗಿದರು.

More News

You cannot copy content of this page