Shankar Patil Munenakoppa: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ನೀಡಲಿ:ಶಂಕರ ಪಾಟೀಲ ಮುನೇನಕೊಪ್ಪ ಆಗ್ರಹ

ಹುಬ್ಬಳ್ಳಿ: ನ್ಯಾಯಾಲಯ ನೀಡಿರುವ ತೀರ್ಪಿನ ಆದಾರದ ಮೇಲೆ ಸಿಎಂ ಸಿದ್ಧರಾಮಯ್ಯ ಅವರು ತಕ್ಷಣವೇ ರಾಜೀನಾಮೆ ನೀಡಬೇಕೆಂದು ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಒತ್ತಾಯಿಸಿದ್ದಾರೆ‌.
ಮೂಡಾ ಹಗರಣದ ಬಗ್ಗೆ ಬಿಜೆಪಿ ನಿರಂತರವಾಗಿ ಹೋರಾಟ ಮಾಡಿತ್ತು. ಈ ಮೂಲಕ ಪಕ್ಷಕ್ಕೂ ದೊಡ್ಡ ಜಯ ಸಿಕ್ಕಿದೆ. ಕಾನೂನು ಎಲ್ಲರಿಗೂ ಒಂದೇ ಎಂಬುದನ್ನ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅರ್ಥ ಮಾಡಿಕೊಳ್ಳಬೇಕು ಎಂದರು.
ಸಿಎಂ ಸಿದ್ಧರಾಮಯ್ಯನವರು ರಾಜೀನಾಮೆ ನೀಡಿ, ತನಿಖೆಯ ನಂತರ ಅವರ ತಪ್ಪು ಇಲ್ಲದೇ ಹೋದರೇ ಮತ್ತೆ ಬೇಕಿದ್ದರೇ ಸಿಎಂ ಆಗಲಿ ಎಂದರು.

More News