ಸಚಿವರ ಮೇಲೆ ನಡೆದಿದೆ ಎರಡೆರಡು ಬಾರಿ ಹನಿಟ್ರ್ಯಾಪ್ ಪ್ರಯತ್ನ! ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪ್ರಭಾವಿ ಸಚಿವರೊಬ್ಬರ ಮೇಲೆ ಎರಡೆರಡು ಬಾರಿ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂಬ ಸ್ಫೋಟಕ ಮಾಹಿತಿಯನ್ನು ಸಚಿವ ಸತೀಶ್ ಜಾರಕಿಹೊಳಿ ನೀಡಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಹನಿಟ್ರ್ಯಾಪ್ ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿದರು. ಹಾಗೂ ಕುತೂಹಲಕಾರಿ ಮಾಹಿತಿಯನ್ನು ಹಂಚಿಕೊಂಡರು.

ಹನಿ ಟ್ರ್ಯಾಪ್ ಒಳಾಗಿರುವ ಬಗ್ಗೆ ಖಚಿತ ಪಡಿಸಿದ ಜಾರಕಿಹೊಳಿ,
ಸಚಿವರ ಮೇಲೆ ಎರಡು ಬಾರಿ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ.
ಇದನ್ನು ಕೆಲವರು ಬಂಡವಾಳ ‌ಮಾಡಿಕೊಂಡಿದ್ದಾರೆ. ಸಂಬಂಧ ಪಟ್ಟ ಸಚಿವರಿಗೆ ದೂರು ಕೊಡಲು ಹೇಳಿದ್ದೀನಿ. ಇದಕ್ಕೆ ‌ಕಡಿವಾಣ ಹಾಕಬೇಕು ಎಂದರು.

ಇದರಲ್ಲಿ ‌ನಮ್ಮವರು ಅಷ್ಟೇ ಅಲ್ಲ. ಬೇರೆ ಪಕ್ಷದ ನಾಯಕರು ಹನಿಟ್ರ್ಯಾಪ್ ನಲ್ಲಿ ಸಿಲುಕಿದ್ದಾರೆ. ಇದು ಇಲ್ಲಿಗೆ ನಿಲ್ಲಬೇಕು. ಈ ವಿಚಾರವಾಗಿ ಸಿಎಂ ಮತ್ತು ಗೃಹ ಸಚಿವರ ಜೊತೆ ಮಾತನಾಡಿದ್ದೇನೆ ಎಂದೂ ತಿಳಿಸಿದರು.

ವದಂತಿ ಅಲ್ಲ ನಿಜ!

ಸಚಿವರೊಬ್ಬರನ್ನು ಗುರಿಯಾಗಿಸಿ
ಹನಿಟ್ರ್ಯಾಪ್ ನಡೆಸಿದ ಕುರಿತಾಗಿ ಆರಂಭಿಕವಾಗಿ ಯಾವುದೇ ಸ್ಪಷ್ಟನೆ ಇರಲಿಲ್ಲ. ಇದೊಂದು ವದಂತಿ ಎಂದೇ ಹೇಳಲಾಗುತ್ತಿತ್ತು. ಆದರೆ, ದಿನದಿಂದ ದಿನಕ್ಕೆ ಹನಿಟ್ರ್ಯಾಪ್ ಕುರಿತಾಗಿ ಒಂದೊಂದೇ ಮಾಹಿತಿಗಳು ಹೊರಬರುತ್ತಿವೆ.

ಶೀಘ್ರದಲ್ಲೇ ಪ್ರಸ್ ಮೀಟ್?

ಹನಿಟ್ರ್ಯಾಪ್ ಗೆ ಪ್ರಯತ್ನ ನಡೆಸಿದ ಬಗ್ಗೆ ಪ್ರಭಾವಿ ಸಚಿವರು ಶೀಘ್ರದಲ್ಲೇ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂಬ ಮಾಹಿತಿ ಇದೆ. ಅದಕ್ಕೂ ಮೊದಲು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ನಿರ್ಧಾರ ಮಾಡಿದ್ದಾರೆ.

ಯಾವ ರೀತಿಯಲ್ಲಿ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ. ಇದರಲ್ಲಿ ಯಾರು ಭಾಗಿಯಾಗಿದ್ದಾರೆ. ಭಾಗಿಯಾದ ವ್ಯಕ್ತಿ ರಾಜ್ಯದ ಮತ್ತೋರ್ವ ಪ್ರಭಾವಿ ರಾಜಕಾರಣಿ ಜೊತೆಗೆ ಯಾವ ರೀತಿಯಲ್ಲಿ ಸಂಪರ್ಕದಲ್ಲಿದ್ದಾರೆ ಎಂಬ ವಿಚಾರವನ್ನು ಬಹಿರಂಗ ಪಡಿಸುವ ಸಾಧ್ಯತೆ ಇದೆ.

ವಿರೋಧ ಪಕ್ಷಗಳಿಂದಲೂ ಖಂಡನೆ

ಸಚಿವರನ್ನು ಹನಿಟ್ರ್ಯಾಪ್ ಗೆ ಒಳಪಡಿಸಲು ನಡೆಸಿದ ಪ್ರಯತ್ನದ ಬಗ್ಗೆ ಪ್ರತಿಪಕ್ಷಗಳ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇಂತಹ ರಾಜಕಾರಣ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

More News